ನವದೆಹಲಿ: ಇತ್ತೀಚೆಗಷ್ಟೇ ವಿವಾಹವಾಗಿ ಹನಿಮೂನ್ಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ದೆಹಲಿ ಮೂಲದ ಯುವ ಮಹಿಳಾ ಟೆಕ್ಕಿಯೊಬ್ಬರು ಮಸೂರಿಯ ಹೋಂಸ್ಟೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೇಶದಾದ್ಯಂತ ಸಂಚಲನ ಮೂಡಿಸಿದೆ.
ಮೃತರನ್ನು 27 ವರ್ಷದ ಪಿ. ರಾಧಾ ಗಾಯತ್ರಿ ಎಂದು ಗುರುತಿಸಲಾಗಿದ್ದು, ಅವರು ಗುರುಗ್ರಾಮದ ಖಾಸಗಿ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ದೆಹಲಿಯ ಕಿದ್ವಾಯಿ ನಗರ ಪೂರ್ವ ಪ್ರದೇಶದಲ್ಲಿ ವಾಸಿಸುತ್ತಿದ್ದ ಅವರು, ಪತಿ ಸೌಮ್ಯ ಶ್ರೀಚರಣ್ ಅವರೊಂದಿಗೆ ಹನಿಮೂನ್ ಪ್ರವಾಸದಲ್ಲಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ದಂಪತಿ ಜೂನ್ 13ರಂದು ದೆಹಲಿಯಿಂದ ಋಷಿಕೇಶ್ಗೆ ಪ್ರಯಾಣ ಬೆಳೆಸಿದ್ದು, ಜೂನ್ 14ರ ತಡರಾತ್ರಿ ಮಸೂರಿಯ ಟಿಪ್ರಿಧಾರ್ ಪ್ರದೇಶದಲ್ಲಿರುವ ಕಿಯಾನಾ ಹೋಂಸ್ಟೇಗೆ ಆಗಮಿಸಿದ್ದರು. ರಾತ್ರಿ ಸುಮಾರು 11.30ರ ವೇಳೆಗೆ ಅವರು ‘ಬ್ಲಿಸ್’ ಹೆಸರಿನ ಕೊಠಡಿಯಲ್ಲಿ ತಂಗಿದ್ದರು.
ಮರುದಿನ ಬೆಳಿಗ್ಗೆ ಎದ್ದ ಪತಿ, ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮಹಿಳೆಯ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದು, ಕೊಠಡಿಯಲ್ಲಿ ರಕ್ತ ಹಾಗೂ ಮೂತ್ರದ ಗುರುತುಗಳು ಕಂಡುಬಂದಿದ್ದವು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಮಾಹಿತಿ ಪಡೆದ ಮಸೂರಿ ಪೊಲೀಸರು 108 ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ವೈದ್ಯಕೀಯ ಸಿಬ್ಬಂದಿ ಮಹಿಳೆಯನ್ನು ಪರೀಕ್ಷಿಸಿದಾಗ ಆಕೆ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ.
ಪೊಲೀಸರ ಪ್ರಾಥಮಿಕ ಪರಿಶೀಲನೆಯಲ್ಲಿ ಮೃತದೇಹ ಬಟ್ಟೆ ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾಸಿಗೆಯ ಮೇಲೂ ರಕ್ತದ ಕಲೆಗಳು ಕಂಡುಬಂದಿವೆ. ಕೊಠಡಿಯಿಂದ ಎರಡು ಖಾಲಿ ಮದ್ಯದ ಬಾಟಲಿಗಳು ಹಾಗೂ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಡೆಹ್ರಾಡೂನ್ನ ಕೊರೊನೇಷನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವೈದ್ಯರ ತಂಡದಿಂದ ಪರೀಕ್ಷೆ ನಡೆಸಿ ಅದರ ವಿಡಿಯೊ ದಾಖಲಾತಿ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ. ವರದಿ ಬಂದ ಬಳಿಕ ಸಾವಿನ ನಿಜವಾದ ಕಾರಣ ಬೆಳಕಿಗೆ ಬರುವ ನಿರೀಕ್ಷೆಯಿದೆ.
ಗಾಯತ್ರಿ ಮತ್ತು ಸೌಮ್ಯ ಶ್ರೀಚರಣ್ ಅವರು 2025ರ ನವೆಂಬರ್ 8ರಂದು ವಿವಾಹವಾಗಿದ್ದರು. ಇಬ್ಬರೂ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿಗಳಾಗಿದ್ದಾರೆ.
ಸದ್ಯ ಈ ನಿಗೂಢ ಸಾವಿನ ಪ್ರಕರಣದ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…