Crime

ಮರ್ಯಾದಾ ಹತ್ಯೆ: 7 ವರ್ಷಗಳ ಬಳಿಕ ತೀರ್ಪು

ತೆಲಂಗಾಣದ ಮಿರ್ಯಾಲಗುಡದಲ್ಲಿ 2018ರಲ್ಲಿ ನಡೆದ ಪ್ರಣಯ್ ಕುಮಾರ್ ಅವರ ಶೋಚನೀಯ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಇದೀಗ ನ್ಯಾಯಾಲಯದಿಂದ ಅಂತಿಮ ತೀರ್ಪು ಹೊರಬಿದ್ದಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಮೃತಾ ಅವರ ತಂದೆ ಮಾರುತಿರಾವ್ ತಮ್ಮ ಅಳಿಯನನ್ನು ಕೊಲ್ಲಲು ಸುಪಾರಿ ನೀಡಿದ್ದು, ಕೊನೆಗೆ ತನಿಖೆ ನಡೆಯುವ ಸಮಯದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರೀತಿಗೆ ವಿರೋಧ—ಮರಣದಂಡನೆಗೆ ಕಾರಣ!

ಪ್ರಣಯ್ ಕುಮಾರ್ ಮತ್ತು ಅಮೃತಾ ಬಾಲ್ಯಸ್ನೇಹಿತರು. ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. ಆದರೆ, ಅಮೃತಾ ಕುಟುಂಬಕ್ಕೆ ಈ ಸಂಬಂಧ ಒಪ್ಪುವಂತೆ ಇರಲಿಲ್ಲ. ಮದುವೆಯಾದ ಬಳಿಕ ದಂಪತಿ ಸಂತೋಷವಾಗಿದ್ದು, ಅಮೃತಾ ಗರ್ಭಿಣಿಯಾಗಿದ್ದರು. 2018ರ ಸೆಪ್ಟೆಂಬರ್ 14ರಂದು, ದಂಪತಿ ಆಸ್ಪತ್ರೆಯಿಂದ ಹಿಂದಿರುಗುವಾಗ, ಪ್ರಣಯ್ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆ ಮಾಡಲಾಯಿತು.

ಈ ಪಿತೃತ್ವ ಘಾತಕ ಕೃತ್ಯದ ಹಿಂದೆ ಅಮೃತಾ ತಂದೆ ಮಾರುತಿರಾವ್ ಅವರ ಪಾತ್ರ ದೊಡ್ಡದಾಗಿತ್ತು. ಅಂತರ್ಜಾತಿ ವಿವಾಹವನ್ನು ವಿರೋಧಿಸಿದ್ದ ಅವರು, ತಮ್ಮ ಅಳಿಯನನ್ನು ಕೊಲ್ಲಲು ಅಜ್ಗರ್ ಅಲಿ ನೇತೃತ್ವದ ಸುಪಾರಿ ಗ್ಯಾಂಗ್ ಅನ್ನು ನೇಮಿಸಿದ್ದರು. ಈ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು ಮತ್ತು ಜಾತಿ ಆಧಾರಿತ ಹಿಂಸೆ ವಿರುದ್ಧ ಉಲ್ಬಣವಾದ ವಾದ-ವಿವಾದಗಳು ಪ್ರಾರಂಭವಾಗಿದ್ದವು.

7 ವರ್ಷಗಳ ನಂತರ ತೀರ್ಪು

ನಲ್ಗೊಂಡ ಜಿಲ್ಲೆಯ ತ್ವರಿತ ನ್ಯಾಯಾಲಯವು ಈ ಪ್ರಕರಣದಲ್ಲಿ ಇಂದು ತೀರ್ಪು ಪ್ರಕಟಿಸಿದೆ. ಸುಭಾಷ್ ಕುಮಾರ್ ಶರ್ಮಾ (A2) ಗೆ ಕ್ರೂರ ಕೊಲೆ ನಡೆಸಿದ ಕಾರಣ ಮರಣದಂಡನೆ ವಿಧಿಸಲಾಗಿದೆ. ಉಳಿದ ಐದು ಆರೋಪಿಗಳಿಗೆ, ಅಜ್ಗರ್ ಅಲಿ (A3), ಅಬ್ದುಲ್ ಭಾರಿ (A4), ಕರೀಮ್ (A5), ಶಿವ (A6), ಮತ್ತು ನದೀಮ್ (A7) ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಪ್ರಮುಖ ಆರೋಪಿ ಮಾರುತಿರಾವ್ (A1) ತನಿಖೆ ನಡೆಯುವಾಗ 2020ರ ಮಾರ್ಚ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮರ್ಯಾದಾ ಹತ್ಯೆಗಳ ವಿರುದ್ಧ ಕಠಿಣ ಸಂದೇಶ

ಈ ಪ್ರಕರಣವು ತೀವ್ರವಾದ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಜಾತಿ ಮತ್ತು ಕುಟುಂಬ ಗೌರವದ ಹೆಸರಿನಲ್ಲಿ ನಡೆಯುವ ಹತ್ಯೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯವಿದೆ ಎಂಬ ವಾದವನ್ನು ಮತ್ತೊಮ್ಮೆ ಮುಂದಿಟ್ಟಿದೆ. ನ್ಯಾಯಾಲಯದ ತೀರ್ಪು, ಸಾಮಾಜಿಕ ಪೂರ್ವಾಗ್ರಹಗಳ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಬಲವಾದ ಸಂದೇಶವನ್ನು ನೀಡಿದೆ.

ಪ್ರಣಯ್ ಅವರ ಕೊಲೆ, ಮರ್ಯಾದಾ ಹತ್ಯೆಗಳ ಕ್ರೂರತೆಯ ಸ್ಪಷ್ಟ ಉದಾಹರಣೆ. ಈ ತೀರ್ಪು ಭವಿಷ್ಯದಲ್ಲಿ ಅಂತಹ ಅಪರಾಧಗಳನ್ನು ತಡೆಯಲು ಸಕಾರಾತ್ಮಕ ಹೆಜ್ಜೆಯಾಗಬಹುದು.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

3 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

3 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

3 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

3 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

3 hours ago