ಭಟ್ಕಳ ತಾಲ್ಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಗುರುವಾರ (ಜುಲೈ 17) ನಡೆದಿದೆ.
ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು, ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು ಕುತ್ತಿಗೆಗೆ ಸುತ್ತಿಕೊಂಡು ತೀವ್ರ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸಹಾಯಕ್ಕಾಗಿ ಕೂಗುವಷ್ಟರಲ್ಲಿ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಯ ಸಮಯದಲ್ಲಿ ತಾಯಿ ಕೆಲಸಕ್ಕೆ ಹೋಗಿದ್ದ ಕಾರಣ ತಕ್ಷಣ ಯಾವುದೇ ಸಹಾಯ ಲಭ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಈ ದುರ್ಘಟನೆ ಆಘಾತ ಮೂಡಿಸಿದ್ದು, ಎಲ್ಲಾ ಕಡೆ ದುಃಖದ ವಾತಾವರಣ ನಿರ್ಮಾಣವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…