Latest

ಇಸ್ಲಾಮಿಕ್ ಶಾಲೆಯಲ್ಲಿ ಭೀಕರ ಬೆಂಕಿ ಅವಘಡ: 17 ಮಕ್ಕಳು ಸಜೀವ ದಹನ

ನೈಜೀರಿಯಾದ ವಾಯುವ್ಯ ಭಾಗದ ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 17 ವಿದ್ಯಾರ್ಥಿಗಳು ಸಜೀವ ದಹನವಾಗಿದ್ದಾರೆ. ಇಸ್ಲಾಮಿಕ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದಾಗ ಸುಮಾರು 100 ಮಕ್ಕಳು ಶಾಲೆಯೊಳಗಿದ್ದರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹಲವು ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ತಕ್ಷಣವೇ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ದೇಶದ ತುರ್ತು ಪ್ರತಿಕ್ರಿಯಾ ಸಂಸ್ಥೆಯು ಈ ದುರಂತವನ್ನು ದೃಢಪಡಿಸಿದ್ದು, ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಕಿ ಅವಘಡಕ್ಕೆ ಏನಾಗಿತ್ತು ಕಾರಣ?

ಪ್ರಾಥಮಿಕ ತನಿಖೆ ಪ್ರಕಾರ, ಶಾಲೆಯೊಳಗೆ ಮರದ ರಾಶಿ ಇದ್ದುದನ್ನು ಗಮನಿಸಲಾಗಿದೆ. ಯಾರೋ ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ದುರಂತದ ಹಿಂದಿನ ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅಧಿಕಾರಿಗಳ ಪ್ರತಿಕ್ರಿಯೆ

ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ತುರ್ತು ನೆರವು ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದರು. ಆದರೆ, ಬೆಂಕಿ ಅತಿ ವೇಗವಾಗಿ ಹಬ್ಬಿದ್ದರಿಂದ ಹಲವಾರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ತನಿಖೆ ನಡೆಸಲು ಆದೇಶ ನೀಡಿದ್ದು, ಬೆಂಕಿ ಹಚ್ಚಿದ ಆರೋಪಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಗಿದೆ.

ಪೀಡಿತ ಕುಟುಂಬಗಳ ದುಃಖ

ಘಟನೆಯಲ್ಲಿ ತಮ್ಮ ಮಗುವನ್ನು ಕಳೆದುಕೊಂಡ ಪೋಷಕರು ಆಘಾತಕ್ಕೊಳಗಾಗಿದ್ದು, ಈ ದುರ್ಘಟನೆಯ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಅಗ್ನಿ ಸುರಕ್ಷಾ ವ್ಯವಸ್ಥೆಗಳ ಕೊರತೆಯೂ ದುರಂತಕ್ಕೆ ಕಾರಣವಾಗಿರಬಹುದೆಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಈ ಹೃದಯವಿದ್ರಾವಕ ಘಟನೆಯಿಂದ ನೈಜೀರಿಯಾದಲ್ಲಿ ಭಾರೀ ಆಕ್ರೋಶ ಮೂಡಿಸಿದ್ದು, ಸರ್ಕಾರದಿಂದ ಕೂಡಲೇ ಸೂಕ್ತ ಕ್ರಮಗಳ ನಿರೀಕ್ಷೆಯಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago