Categories: CrimeLatest

ಭೀಕರ ರಸ್ತೆ ಅಪಘಾತ: BMW ಕಾರಿನ ಮೇಲೆ ಲಾರಿ ಪಲ್ಟಿ, ಹೈಕೋರ್ಟ್ ವಕೀಲರ ದುರ್ಮರಣ

ಆಂಧ್ರಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಹೈಕೋರ್ಟ್ ವಕೀಲರು ದಾರುಣವಾಗಿ ಮೃತಪಟ್ಟಿದ್ದಾರೆ. ಸಿಮೆಂಟ್ ತುಂಬಿದ ಟ್ಯಾಂಕರ್ ಲಾರಿ ಚಲಿಸುತ್ತಿದ್ದ BMW ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.

ಮೃತರನ್ನು ಬಿ. ಶ್ರೀನಿವಾಸ ರಾವ್ ಎಂದು ಗುರುತಿಸಲಾಗಿದೆ. ಅವರು ಅಮರಾವತಿಯಲ್ಲಿ ನಡೆದ ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಭಾಗವಹಿಸಿ, ಬಳಿಕ ತಮ್ಮ BMW ಕಾರಿನಲ್ಲಿ ಹೈದರಾಬಾದ್ ಕಡೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕೀಸರ ಟೋಲ್ ಗೇಟ್ ದಾಟುತ್ತಿದ್ದ ವೇಳೆ, ಅತಿವೇಗದಲ್ಲಿ ಬಂದ ಸಿಮೆಂಟ್ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ. ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತಿಸಲು ಕಷ್ಟವಾಗುವಷ್ಟು ಹಾನಿಗೊಂಡಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಜೆಸಿಬಿ ಮತ್ತು ಕ್ರೇನ್ ಸಹಾಯದಿಂದ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಲಾರಿಯನ್ನು ತೆರವುಗೊಳಿಸಿ, ವಕೀಲರ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಕುರಿತು ವಿಜಯವಾಡ ಪೊಲೀಸ್ ಆಯುಕ್ತ ಎಸ್.ವಿ. ರಾಜಶೇಖರ ಬಾಬು ಪ್ರತಿಕ್ರಿಯಿಸಿ, “ಟ್ಯಾಂಕರ್‌ನ ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು” ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಲಾರಿಯಲ್ಲಿ ಅತಿಯಾದ ಭಾರವಿತ್ತೇ ಅಥವಾ ಚಾಲಕನ ನಿರ್ಲಕ್ಷ್ಯವೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಅಪಘಾತದ ಪರಿಣಾಮವಾಗಿ ಹೈದರಾಬಾದ್–ವಿಜಯವಾಡ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕಂಚಿಕಚರ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕೆಲವೇ ದಿನಗಳಲ್ಲಿ ಸಾಯುತ್ತಿದ್ದೇನೆ, ನಿನ್ನ ಬೆತ್ತಲೆ ನೋಡಬೇಕು ಎಂದು ನಂಬಿಸಿ ವಿಡಿಯೋ ಪಡೆದು ಶಿಕ್ಷಕಿಗೆ ಟಾರ್ಚರ್..!

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶಿಕ್ಷಕಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಮೋಸಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯೊಬ್ಬನು ಇನ್‌ಸ್ಟಾಗ್ರಾಂ…

3 hours ago

2 ಲಕ್ಷ ಲಂಚ ಬೇಡಿಕೆ: ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್‌ಗೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತರ…

3 hours ago

15 ನಿಮಿಷದಲ್ಲಿ ಕಾಣೆಯಾದವಳು,1500 ಅಡಿ ಆಳದಲ್ಲಿ ಪತ್ತೆ: ಶ್ರೀನಂದಾ ಸಾವು ಹೇಗಾಯ್ತು?

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದ ಘಟನೆ…

5 hours ago

ತಡರಾತ್ರಿ ಭೀಕರ ಅಪಘಾತ: ಸಹ ಕಲಾವಿದ ಹರೀಶ್ ಸ್ಥಳದಲ್ಲೇ ಸಾವು

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ…

6 hours ago

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15.45 ಕೋಟಿ ದೋಚಿದ ವಂಚಕರು: ಉದ್ಯಮಿಗೆ ಸಿಬಿಐ ಹೆಸರಿನಲ್ಲಿ ಬಲೆ

ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಉದ್ಯಮಿಯೊಬ್ಬರನ್ನು ಭಯಭೀತಿಗೊಳಿಸಿ 15 ಕೋಟಿ…

6 hours ago

ವಿಡಿಯೋ ಕಾಲ್ ಮಧ್ಯೆ ಆತ್ಮಹತ್ಯೆ: ಪ್ರೇಮ ವೈಫಲ್ಯದಿಂದ ಯಲಹಂಕದಲ್ಲಿ ಯುವಕನ ದುರ್ಮರಣ

ಪ್ರೀತಿ ಹೆಸರಿನಲ್ಲಿ ವಂಚನೆ ಆರೋಪದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಅಟ್ಟೂರು…

6 hours ago