Categories: Latest

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಬೃಹತ್ ಮರದ ಕೊಂಬೆ ಬಿದ್ದ ಪರಿಣಾಮ, ಸವಾರ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದಾರೆ.

ಬುಧವಾರ ಸಂಜೆ ನಡೆದ ಈ ದುರ್ಘಟನೆಯಲ್ಲಿ ಗಾಯಗೊಂಡವರು 52 ವರ್ಷದ ಸತೀಶ್. ಅವರು ಖಾಸಗಿ ಹಣಕಾಸು ಸಂಸ್ಥೆಯೊಂದರಲ್ಲಿ ಕಲೆಕ್ಷನ್ ಕೆಲಸ ಮಾಡುತ್ತಿದ್ದು, ಎಂದಿನಂತೆ ದ್ವಿಚಕ್ರ ವಾಹನದಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಜೋರಾಗಿ ಬೀಸಿದ ಗಾಳಿಗೆ ರಸ್ತೆ ಬದಿಯಲ್ಲಿದ್ದ ಒಣಗಿದ ಮರದ ಕೊಂಬೆಯೊಂದು ಮುರಿದು ನೇರವಾಗಿ ಸತೀಶ್ ಅವರ ತಲೆಯ ಮೇಲೆ ಬಿದ್ದಿದೆ. ಕೊಂಬೆ ಅಪ್ಪಳಿಸಿದ ತಕ್ಷಣವೇ ಅವರು ಬೈಕ್ ಸಮೇತ ರಸ್ತೆಗೆ ಕುಸಿದು ಬಿದ್ದಿದ್ದು, ತೀವ್ರ ರಕ್ತಸ್ರಾವ ಉಂಟಾಗಿದೆ.

ಸ್ಥಳೀಯರು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ತಲೆಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದು, ಸತೀಶ್ ಅವರು ಸದ್ಯ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ 48 ಗಂಟೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಜಿಬಿಎ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಬದಿಯ ಮರಗಳು ಒಣಗಿ ಅಪಾಯಕಾರಿಯಾಗಿ ನಿಂತಿದ್ದರೂ, ಹಲವು ಬಾರಿ ದೂರು ನೀಡಿದ ಬಳಿಕವೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

11 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

11 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

11 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

11 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago