Categories: CrimeLatest

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವವು ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಹಳಿ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾರಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಕಾರಿನೊಳಗಿದ್ದ ರಾಜು ಬೋಳಶೆಟ್ಟಿ ಅವರ ದೇಹವು ಗುರುತಿಸಲು ಅಸಾಧ್ಯವಾಗುವಷ್ಟು ಸುಟ್ಟು ಕರಕಲಾಗಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಈ ಘಟನೆ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಆಗಿರಬಹುದೆಂಬ ಅನುಮಾನ ಬಲವಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದುಷ್ಕರ್ಮಿಗಳು ನಿರ್ಜನ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃತ್ಯ ಎಸಗಿ ಪರಾರಿಯಾಗಿರುವ ಸಾಧ್ಯತೆ ಇದೆ. ಪ್ರಕರಣದ ಸತ್ಯಾಂಶ ತಿಳಿಯಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

8 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

8 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

16 hours ago

2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ

ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ…

16 hours ago

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 day ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

1 day ago