Categories: CrimeLatest

ಭೀಮಾತೀರದಲ್ಲಿ ಭೀಕರ ಹತ್ಯಾಕಾಂಡ: 25 ಎಕರೆ ಜಮೀನು ಜಗಳಕ್ಕೆ ಒಂದೇ ಕುಟುಂಬದ 6 ಮಂದಿಯ ಹತ್ಯೆ

ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಜಮೀನು ವಿವಾದದ ಹಿನ್ನೆಲೆ ಒಂದೇ ಕುಟುಂಬದ ಆರು ಮಂದಿಯನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.

ಸಂಜೆ ವೇಳೆಯಲ್ಲಿ ನಡೆದ ಈ ದಾಳಿಯಲ್ಲಿ ಹಂತಕರು ಮೊದಲು ಗುಂಡಿನ ದಾಳಿ ನಡೆಸಿ, ಬಳಿಕ ಲಾಂಗು ಮತ್ತು ಮಚ್ಚುಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದೋಕುಳಿ ಹರಿದಿದ್ದು, ಮೃತದೇಹಗಳ ಸ್ಥಿತಿ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೆಲವರ ದೇಹಗಳು ಛಿದ್ರಗೊಂಡಿದ್ದು, ಇನ್ನೂ ಕೆಲವರ ಕೈಕಾಲುಗಳು ಕತ್ತರಿಸಲ್ಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಸುಮಾರು 25 ಎಕರೆ ಜಮೀನಿನ ವಿಚಾರವಾಗಿ ಹಲವು ವರ್ಷಗಳಿಂದ ತೀವ್ರ ವೈಷಮ್ಯ ನಡೆಯುತ್ತಿತ್ತು. ವಿವಾದಿತ ಜಮೀನಿನಲ್ಲಿ ಕೃಷಿ ಕಾರ್ಯ ಆರಂಭಿಸಲು ನಿರಾಳೆ ಕುಟುಂಬದವರು ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.

ಪಟ್ಟಣ ಪಂಚಾಯ್ತಿ ಸದಸ್ಯ ಚೇತನ ನಿರಾಳೆ ಕುಟುಂಬದವರ ಮೇಲೆ ಅಪ್ಪುಗೌಡ ಮತ್ತು ಆತನ ಸಹಚರರು ಪೂರ್ವಯೋಜಿತವಾಗಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂದೂಕು, ಲಾಂಗು ಹಾಗೂ ಮಚ್ಚುಗಳನ್ನು ಹಿಡಿದು ಬಂದಿದ್ದ ತಂಡ ಹೊಲದಲ್ಲಿದ್ದವರನ್ನು ಅಟ್ಟಾಡಿಸಿಕೊಂಡು ಹತ್ಯೆ ಮಾಡಿದೆ. ಈ ವೇಳೆ ಕೂಲಿ ಕೆಲಸಕ್ಕೆ ಬಂದಿದ್ದ ಶಬ್ಬೀರ್ ಎಂಬಾತ ಕೂಡ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ.

ಮೊದಲು ಗುಂಡಿನ ದಾಳಿ ನಡೆಸಿ, ಬಳಿಕ ನೆಲಕ್ಕುರುಳಿದವರ ಮೇಲೆ ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಒಂದೇ ಜಾಗದಲ್ಲಿ ಆರು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಆರೋಪಿ ಅಪ್ಪುಗೌಡ ಭೀಮಾತೀರ ಪ್ರದೇಶದ ಹಳೆಯ ವೈಷಮ್ಯಗಳ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

6 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

6 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

6 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

7 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

10 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago