ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಚಾಮರಾಜಪೇಟೆ ಕಾಲೋನಿಯ ನಿವಾಸಿ ಶ್ರೀಕಾಂತ್ (29) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಶ್ರೀಕಾಂತ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದರು. ಬುಧವಾರ ಬೆಳಗಿನ ಜಾವ ನಡೆದ ಈ ಕ್ರೂರ ಹತ್ಯೆಯ ಹಿನ್ನೆಲೆಯಲ್ಲಿ ಸ್ಥಳೀಯರು ಬೆಚ್ಚಿಬಿದ್ದರು.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಶವದ ಪಕ್ಕದಲ್ಲಿಯೇ ರಕ್ತಸಿಕ್ತ ಕಲ್ಲು ಪತ್ತೆಯಾಗಿದೆ. ಇದುವರೆಗೆ ಹತ್ಯೆಗೆ ಸ್ಪಷ್ಟ ಕಾರಣ ಬೆಳಕಿಗೆ ಬಂದಿಲ್ಲ. ಆದರೆ ವೈಯಕ್ತಿಕ ದ್ವೇಷವೇ ಈ ಕೃತ್ಯದ ಹಿಂದೆ ಇರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಪ್ರಗತಿಯಲ್ಲಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…