ಕಲಬುರಗಿ ಜಿಲ್ಲೆ ರಾಜಾಪುರ ಬಡಾವಣೆಯ ಹೊಟೇಲ್ ಎದುರು ನಡೆದ ಭೀಕರ ಹತ್ಯೆ ಪ್ರಕರಣದಿಂದ ಇಡೀ ನಗರ ಬೆಚ್ಚಿಬಿದ್ದಿದೆ. ಮೂರು ಯುವಕರು ಸೇರಿ ರೇವಣಸಿದ್ದಪ್ಪ ಪಾಳೇಕಾರ್ (33) ಎಂಬವರನ್ನು ಕೊಲೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೊ ಇದೀಗ ವೈರಲ್ ಆಗುತ್ತಿದೆ.
ತಡರಾತ್ರಿ ಸುಮಾರು 2 ಗಂಟೆಗೆ, ಇಬ್ಬರು ಬೈಕ್ ಸವಾರರು ರೇವಣಸಿದ್ದಪ್ಪನನ್ನು ಎತ್ತಿಕೊಂಡು ಬಂದಿದ್ದು, ನಂತರ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಈ ಘಟನೆ ಸ್ನೇಹಿತರ ಮಧ್ಯೆ ಜಗಳದಿಂದ ಉಂಟಾಗಿದೆಯೆಂಬ ಶಂಕೆ ವ್ಯಕ್ತವಾಗಿದೆ. ಸಿಗರೇಟ್ ಸೇದುವ ಸಂದರ್ಭದಲ್ಲಿ ಮಾತಿನ ಚಕಮಕಿಯಿಂದ ಗಲಾಟೆ ಆರಂಭವಾಗಿ ಕೊಲೆಯಲ್ಲಿ ಅಂತ್ಯಗೊಂಡಿರುವುದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…