Categories: CrimeLatest

ತುಮಕೂರಿನಲ್ಲಿ ಭೀಕರ ಹತ್ಯೆ: ರೌಡಿಶೀಟರ್ ಮಲ್ಲನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ ಸೃಷ್ಟಿಸಿದೆ. ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮೃತನನ್ನು ಬೆಳಗುಂಬ ನಿವಾಸಿ ಮಲ್ಲ (38) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಮಲ್ಲನನ್ನು ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿ, ಮುಖ ಹಾಗೂ ದೇಹವನ್ನು ಗುರುತಿಸಲಾಗದಷ್ಟು ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮಲ್ಲ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದನು. 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಕುಖ್ಯಾತ ‘ಗಡ್ಡ ರಾಜು’ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಹಿನ್ನೆಲೆ, ಆತನ ವಿರುದ್ಧ ಪೊಲೀಸರು ರೌಡಿಪಟ್ಟಿ ತೆರೆದು ನಿರಂತರ ನಿಗಾ ವಹಿಸುತ್ತಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಹಳೆಯ ವೈಷಮ್ಯ ಅಥವಾ ಗ್ಯಾಂಗ್‌ವಾರ್‌ ಈ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಕ್ಯಾತ್ಸಂದ್ರ ಹಾಗೂ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆ ಮತ್ತು ಬಂಧನಕ್ಕೆ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಪುಸ್ತಕ ಲೋಕಾರ್ಪಣೆ: ಲೀಲಾವತಿ–ರಾಜ್‌ಕುಮಾರ್‌ ಕುರಿತ ವಿವಾದಗಳಿಗೆ ದಾಖಲೆಗಳ ಸಮೇತ ಉತ್ತರ ಎಂದ ಎನ್‌.ಆರ್‌. ರಮೇಶ್

ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್‌ ಅವರ ಹಿನ್ನೆಲೆ ಹಾಗೂ ಈ…

1 hour ago

‘ನಾನು ಪೋಸ್ಟ್ ಡಿಲೀಟ್ ಮಾಡುವುದಿಲ್ಲ’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸಂಸದೆ ಪುತ್ರಿಯ ಬಹಿರಂಗ ಸವಾಲ್

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ…

1 hour ago

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

21 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

21 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

21 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

22 hours ago