ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. 60 ವರ್ಷದ ಸುಬ್ಬಮ್ಮ ಎಂಬ ವೃದ್ಧೆಯ ಮೇಲೆ ದುಷ್ಕರ್ಮಿಗಳು ಅಮಾನುಷವಾಗಿ ಹಲ್ಲೆ ನಡೆಸಿ, ಕಿವಿಯಲ್ಲಿದ್ದ ಬಂಗಾರದ ವಾಲೆಗಳನ್ನು ಕಿವಿಯ ಸಮೇತ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಬ್ಬಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ, ಸುಬ್ಬಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಕುಟುಂಬದ ಸದಸ್ಯರು ಜಮೀನಿನ ಕೆಲಸಕ್ಕೆ ತೆರಳಿದ್ದರು. ಈ ಸಂದರ್ಭವನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ, ವೃದ್ಧೆಯ ಬಳಿ ಇದ್ದ ಬಂಗಾರದ ವಾಲೆಗಳನ್ನು ದೋಚಲು ಯತ್ನಿಸಿದ್ದಾರೆ.
ಆದರೆ ಸುಬ್ಬಮ್ಮ ಅವರು ಕೂಗಾಡುತ್ತ ಪ್ರತಿರೋಧ ವ್ಯಕ್ತಪಡಿಸಿದಾಗ, ಆರೋಪಿಗಳು ಬಲವಂತವಾಗಿ ವಾಲೆಗಳನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ ಅವರ ಕಿವಿಗಳಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ರಕ್ತಸ್ರಾವ ಉಂಟಾಗಿದೆ. ಅಲ್ಲದೆ, ವೃದ್ಧೆ ನಿರಂತರವಾಗಿ ಕೂಗಾಡುತ್ತಿದ್ದುದರಿಂದ ಕೋಪಗೊಂಡ ಕಳ್ಳರು ತಲೆಗೆ ಭಾರವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯ ನಂತರ ಸುಬ್ಬಮ್ಮ ಅವರು ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ತಕ್ಷಣ ನೆರವು ದೊರಕಲಿಲ್ಲ. ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಗೆ ಬಂದ ಸೊಸೆ, ವೃದ್ಧೆಯ ಸ್ಥಿತಿ ಕಂಡು ಬೆಚ್ಚಿಬಿದ್ದಿದ್ದಾರೆ. ಬಳಿಕ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಸಹಾಯದಿಂದ ಅವರನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಪ್ರಾಥಮಿಕ ಚಿಕಿತ್ಸೆ ಬಳಿಕ ವೈದ್ಯರು ತಲೆಗೆ ಗಂಭೀರ ಪೆಟ್ಟಾಗಿರುವುದನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ಬಮ್ಮ ಅವರು ಕೊನೆಯುಸಿರೆಳೆದಿದ್ದಾರೆ.
ಹಗಲು ಹೊತ್ತಿನಲ್ಲೇ ಮನೆಗೆ ನುಗ್ಗಿ ವೃದ್ಧೆಯ ಮೇಲೆ ದಾಳಿ ನಡೆಸಿದ ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…