Latest

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಜೇನು ಕೃಷಿ ಪದ್ಧತಿ ತರಬೇತಿ

ಮುಂಡಗೋಡ: ತಾಲ್ಲೂಕಿನ ರೈತರು ತಮ್ಮ ಕೃಷಿ ಬೇಸಾಯದೊಂದಿಗೆ ಜೇನು ಕೃಷಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರಾಷ್ಟ್ರೀಯ ಜೇನುಮಂಡಳಿ ನವದೆಹಲಿ, ಜಿಲ್ಲಾ ಪಂಚಾಯತ್ ಉತ್ತರಕನ್ನಡ ಹಾಗೂ ತಾಲೂಕಾ ತೋಟಗಾರಿಕೆ ಇಲಾಖೆಯವರು 2024-25 ರ ಸಾಲಿನಲ್ಲಿ ಆಸಕ್ತ ರೈತರಿಗೆ ವೈಜ್ಞಾನಿಕ ಜೇನು ಕೃಷಿ ಪದ್ಧತಿ ತರಬೇತಿ ಕಾರ್ಯಕ್ರಮ 30 15-3-2025 ರಿಂದ 21-3-2025 ರವರೆಗೆ ವಿವಿಧ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗಿ ನಡೆಸಲಾಯಿತು. ಗುರುವಾರ ಜೇನು ಕೃಷಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಗಳ್ಳಿ ಗ್ರಾಮದ ಕಲ್ಮೇಶ್ವರ ಮಹಾರಾಜರ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಚಿಗಳ್ಳಿ ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ದೀಪಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಕೃಷ್ಣ ಕೂಳ್ಳೂರ ರೈತರು ತಮ್ಮ ಹೊಲಗದ್ದೆಗಳಲ್ಲಿ ಕೃಷಿಯ ಬೆಳೆಯೊಂದಿಗೆ ಜೇನು ಸಾಕಾಣಿಕೆ ಮಾಡಿ ಜೇನಿನ ಉಪ ಉತ್ಪನ್ನಗಳಿಂದ ಆರ್ಥಿಕವಾಗಿ ಸುಧಾರಿಸಬಹುದಾಗಿದೆ ಎಂದರು.

ರೈತರು ಈ ಕುರಿತು ಮುತುವರ್ಜಿವಹಿಸುವುದು ಅತ್ಯಗತ್ಯವಿದೆ. ಬೆಳೆಗಳ ಇಳುವರಿ ಕಡಿಮೆಯಾಗಿ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಜೇನು ಸಾಕಾಣಿಕೆ ಕೈ ಹಿಡಿಯುತ್ತದೆ. ಜೇನು ಸಾಕಾಣಿಕೆ ಮಾಡಲು ಆಸಕ್ತ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತದೆ. ರೈತರು ಜೇನು ಸಾಕಾಣಿಕೆ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕ ಸಭಲರಾಗಬೇಕೆಂದು ಕಿರಣ ತಿಳಿಸಿದರು.

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಯುವಕ ಯಶ್‌ ರಾಜ ತಾವು ಇಲಾಖೆಯಿಂದ ಸಬ್ಸಿಡಿ ಪಡೆದು ಜೇನು ಕೃಷಿಮಾಡಿ ಯಶಸ್ವಿಯಾದ ಕುರಿತು ಅದರಿಂದ ಪಡೆದಿರುವ ಲಾಭದ ಕುರಿತು ವಿವರಿಸಿ ಹೇಳಿ ಜೇನು ಕೃಷಿಯನ್ನು ಮಾಡುವುದು ಹೇಗೆ ಅದರ ಪಾಲನೆ ಪೋಷಣೆ ಮಾಡುವುದು ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಕೃಷಿ ಸಖಿಯರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ರಮೇಶ ಜಮಖಂಡಿ, ತೋಟಗಾರಿಕೆ ಸಹಾಯಕರಾದ ರಾಮಪ್ಪ ನಡುವಿನಮನಿ ಹಾಗೂ ಜೇನು ಕೃಷಿ ಆಸಕ್ತ ಸಮಾರ 50 ಕ್ಕೂ ಅಧಿಕ ರೈತರು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

12 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

12 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

12 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

12 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

13 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago