Latest

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಜೇನು ಕೃಷಿ ಪದ್ಧತಿ ತರಬೇತಿ

ಮುಂಡಗೋಡ: ತಾಲ್ಲೂಕಿನ ರೈತರು ತಮ್ಮ ಕೃಷಿ ಬೇಸಾಯದೊಂದಿಗೆ ಜೇನು ಕೃಷಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರಾಷ್ಟ್ರೀಯ ಜೇನುಮಂಡಳಿ ನವದೆಹಲಿ, ಜಿಲ್ಲಾ ಪಂಚಾಯತ್ ಉತ್ತರಕನ್ನಡ ಹಾಗೂ ತಾಲೂಕಾ ತೋಟಗಾರಿಕೆ ಇಲಾಖೆಯವರು 2024-25 ರ ಸಾಲಿನಲ್ಲಿ ಆಸಕ್ತ ರೈತರಿಗೆ ವೈಜ್ಞಾನಿಕ ಜೇನು ಕೃಷಿ ಪದ್ಧತಿ ತರಬೇತಿ ಕಾರ್ಯಕ್ರಮ 30 15-3-2025 ರಿಂದ 21-3-2025 ರವರೆಗೆ ವಿವಿಧ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗಿ ನಡೆಸಲಾಯಿತು. ಗುರುವಾರ ಜೇನು ಕೃಷಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಗಳ್ಳಿ ಗ್ರಾಮದ ಕಲ್ಮೇಶ್ವರ ಮಹಾರಾಜರ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಚಿಗಳ್ಳಿ ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ದೀಪಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಕೃಷ್ಣ ಕೂಳ್ಳೂರ ರೈತರು ತಮ್ಮ ಹೊಲಗದ್ದೆಗಳಲ್ಲಿ ಕೃಷಿಯ ಬೆಳೆಯೊಂದಿಗೆ ಜೇನು ಸಾಕಾಣಿಕೆ ಮಾಡಿ ಜೇನಿನ ಉಪ ಉತ್ಪನ್ನಗಳಿಂದ ಆರ್ಥಿಕವಾಗಿ ಸುಧಾರಿಸಬಹುದಾಗಿದೆ ಎಂದರು.

ರೈತರು ಈ ಕುರಿತು ಮುತುವರ್ಜಿವಹಿಸುವುದು ಅತ್ಯಗತ್ಯವಿದೆ. ಬೆಳೆಗಳ ಇಳುವರಿ ಕಡಿಮೆಯಾಗಿ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಜೇನು ಸಾಕಾಣಿಕೆ ಕೈ ಹಿಡಿಯುತ್ತದೆ. ಜೇನು ಸಾಕಾಣಿಕೆ ಮಾಡಲು ಆಸಕ್ತ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತದೆ. ರೈತರು ಜೇನು ಸಾಕಾಣಿಕೆ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕ ಸಭಲರಾಗಬೇಕೆಂದು ಕಿರಣ ತಿಳಿಸಿದರು.

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಯುವಕ ಯಶ್‌ ರಾಜ ತಾವು ಇಲಾಖೆಯಿಂದ ಸಬ್ಸಿಡಿ ಪಡೆದು ಜೇನು ಕೃಷಿಮಾಡಿ ಯಶಸ್ವಿಯಾದ ಕುರಿತು ಅದರಿಂದ ಪಡೆದಿರುವ ಲಾಭದ ಕುರಿತು ವಿವರಿಸಿ ಹೇಳಿ ಜೇನು ಕೃಷಿಯನ್ನು ಮಾಡುವುದು ಹೇಗೆ ಅದರ ಪಾಲನೆ ಪೋಷಣೆ ಮಾಡುವುದು ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಕೃಷಿ ಸಖಿಯರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ರಮೇಶ ಜಮಖಂಡಿ, ತೋಟಗಾರಿಕೆ ಸಹಾಯಕರಾದ ರಾಮಪ್ಪ ನಡುವಿನಮನಿ ಹಾಗೂ ಜೇನು ಕೃಷಿ ಆಸಕ್ತ ಸಮಾರ 50 ಕ್ಕೂ ಅಧಿಕ ರೈತರು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

2 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

2 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

12 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

12 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

12 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

12 hours ago