Latest

ತೋಟಗಾರಿಕೆ ಅಧಿಕಾರಿ ಫೋನ್ ಪೇ ಲಂಚ: ಲೋಕಾಯುಕ್ತ ದಾಳಿ, ಅಧಿಕಾರಿ ವಶಕ್ಕೆ”

ಯಾದಗಿರಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಈರುಳ್ಳಿ ಶೇಡ್ ನಿರ್ಮಾಣಕ್ಕಾಗಿ ಸಬ್ಸಿಡಿ ಬಿಡುಗಡೆ ಸಂಬಂಧ ಹಣದ ಲಂಚ ಬೇಡಿಕೆ ಇಟ್ಟು, ಅದರಲ್ಲಿ ಭಾಗಶಃ ಹಣವನ್ನು ಫೋನ್ ಪೇ ಮೂಲಕ ಸ್ವೀಕರಿಸಿದ್ದ ಸಹಾಯಕ ನಿರ್ದೇಶಕ ಶಿವದತ್ತ, ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದಿದ್ದಾರೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಅವರು ಈರುಳ್ಳಿ ಶೇಡ್ ನಿರ್ಮಿಸಿದ್ದಕ್ಕಾಗಿ ಸರ್ಕಾರದಿಂದ 80 ಸಾವಿರ ರೂಪಾಯಿ ಸಬ್ಸಿಡಿ ಮಂಜೂರಾಗಿತ್ತು. ಆದರೆ ಈ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಅಧಿಕಾರಿಯಾದ ಶಿವದತ್ತ ಅವರು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು.

ಇಂದು (ಗುರುವಾರ) ಅಧಿಕಾರಿಯು ಶಂಕರೆಪ್ಪನಿಗೆ ಲಂಚ ಹಣ ಜಮೆ ಮಾಡಲು ಫೋನ್ ಪೇ ನಂಬರ್ ಒದಗಿಸಿದ್ದು, ರೈತ 5 ಸಾವಿರ ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರೈತ ಶಂಕರೆಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಡಾಕ್ಯುಮೆಂಟ್‌ಗಳ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ಹಾಗೂ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಪಿಐಗಳಾದ ಸಿದ್ದರಾಯ ಹಾಗೂ ಸಂಗಮೇಶ ನೇತೃತ್ವ ವಹಿಸಿದ್ದರು. ಜೊತೆಗೆ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ, ಮಲ್ಲಪ್ಪ, ಖಾಸಿಂ, ಮಲ್ಲಿನಾಥ ಹಾಗೂ ಮಲ್ಲಿಕಾರ್ಜುನ ಮಡಿವಾಳ ಸಹ ಭಾಗವಹಿಸಿದ್ದರು.

ಪ್ರಸ್ತುತ ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago