Latest

ತೋಟಗಾರಿಕೆ ಅಧಿಕಾರಿ ಫೋನ್ ಪೇ ಲಂಚ: ಲೋಕಾಯುಕ್ತ ದಾಳಿ, ಅಧಿಕಾರಿ ವಶಕ್ಕೆ”

ಯಾದಗಿರಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಈರುಳ್ಳಿ ಶೇಡ್ ನಿರ್ಮಾಣಕ್ಕಾಗಿ ಸಬ್ಸಿಡಿ ಬಿಡುಗಡೆ ಸಂಬಂಧ ಹಣದ ಲಂಚ ಬೇಡಿಕೆ ಇಟ್ಟು, ಅದರಲ್ಲಿ ಭಾಗಶಃ ಹಣವನ್ನು ಫೋನ್ ಪೇ ಮೂಲಕ ಸ್ವೀಕರಿಸಿದ್ದ ಸಹಾಯಕ ನಿರ್ದೇಶಕ ಶಿವದತ್ತ, ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದಿದ್ದಾರೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಅವರು ಈರುಳ್ಳಿ ಶೇಡ್ ನಿರ್ಮಿಸಿದ್ದಕ್ಕಾಗಿ ಸರ್ಕಾರದಿಂದ 80 ಸಾವಿರ ರೂಪಾಯಿ ಸಬ್ಸಿಡಿ ಮಂಜೂರಾಗಿತ್ತು. ಆದರೆ ಈ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಅಧಿಕಾರಿಯಾದ ಶಿವದತ್ತ ಅವರು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು.

ಇಂದು (ಗುರುವಾರ) ಅಧಿಕಾರಿಯು ಶಂಕರೆಪ್ಪನಿಗೆ ಲಂಚ ಹಣ ಜಮೆ ಮಾಡಲು ಫೋನ್ ಪೇ ನಂಬರ್ ಒದಗಿಸಿದ್ದು, ರೈತ 5 ಸಾವಿರ ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರೈತ ಶಂಕರೆಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಡಾಕ್ಯುಮೆಂಟ್‌ಗಳ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ಹಾಗೂ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಪಿಐಗಳಾದ ಸಿದ್ದರಾಯ ಹಾಗೂ ಸಂಗಮೇಶ ನೇತೃತ್ವ ವಹಿಸಿದ್ದರು. ಜೊತೆಗೆ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ, ಮಲ್ಲಪ್ಪ, ಖಾಸಿಂ, ಮಲ್ಲಿನಾಥ ಹಾಗೂ ಮಲ್ಲಿಕಾರ್ಜುನ ಮಡಿವಾಳ ಸಹ ಭಾಗವಹಿಸಿದ್ದರು.

ಪ್ರಸ್ತುತ ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

50 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

51 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago