ಮೈಸೂರಿನ ಬೋಗಾದಿ ರಿಂಗ್ ರಸ್ತೆ ಬಳಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ದಂಧೆಯಲ್ಲಿ ಕೃತ್ಯವೆಸಗುತ್ತಿದ್ದ ಕೆಎಸ್ಆರ್ಟಿಸಿ ನೌಕರಿ ತ್ಯಜಿಸಿ ತಪ್ಪುದಾರಿ ಹಿಡಿದ ರತನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಥೈಲ್ಯಾಂಡ್ನಿಂದ ಯುವತಿಯರ ಕರೆತರುವ ದಂಧೆ
ಆರೋಪಿ ರತನ್ ವೇಶ್ಯಾವಾಟಿಕೆ ನಡೆಸಲು ಥೈಲ್ಯಾಂಡ್ನಿಂದ ಯುವತಿಯರನ್ನು ಕರೆಸುತ್ತಿದ್ದನು. ಬೋಗಾದಿ ರಿಂಗ್ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ದಂಧೆ ನಡೆಸಲಾಗುತ್ತಿತ್ತು. ಹೆಚ್ಚಿನ ಹಣ ಪಡೆಯಲು ಪ್ರತಿ ಗ್ರಾಹಕನಿಂದ 8,000 ರಿಂದ 10,000 ರೂಪಾಯಿಗಳ ವಸೂಲಿ ಮಾಡಲಾಗುತ್ತಿತ್ತು.
ಪೊಲೀಸರ ದಾಳಿ
ವಿಶ್ವಾಸಾರ್ಹ ಮಾಹಿತಿ ಆಧಾರದ ಮೇಲೆ ಶನಿವಾರ ಪೋಲೀಸರು ಹೋಟೆಲ್ ಮೇಲೆ ದಾಳಿ ನಡೆಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು ರತನ್ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ನಂತರ ಹೊಸ ವಿಚಾರಗಳು ಹೊರಬಿದ್ದಿವೆ
ಥೈಲ್ಯಾಂಡ್ನಿಂದ ಬಂದಿದ್ದ ಯುವತಿಯರನ್ನು ವಿಚಾರಣೆ ನಡೆಸಿದಾಗ, ಅವರು ಮೈಸೂರಿಗೆ ವ್ಯವಹಾರ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಮೈಸೂರಿಗೆ ಅವರು ಬಂದಿದ್ದು ದಾಳಿ ನಡೆದ ದಿನಕ್ಕಿಂತ ಒಂದು ದಿನದಷ್ಟೇ ಮುಂಚೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…