ಮೈಸೂರಿನ ಬೋಗಾದಿ ರಿಂಗ್ ರಸ್ತೆ ಬಳಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ದಂಧೆಯಲ್ಲಿ ಕೃತ್ಯವೆಸಗುತ್ತಿದ್ದ ಕೆಎಸ್ಆರ್ಟಿಸಿ ನೌಕರಿ ತ್ಯಜಿಸಿ ತಪ್ಪುದಾರಿ ಹಿಡಿದ ರತನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಥೈಲ್ಯಾಂಡ್ನಿಂದ ಯುವತಿಯರ ಕರೆತರುವ ದಂಧೆ
ಆರೋಪಿ ರತನ್ ವೇಶ್ಯಾವಾಟಿಕೆ ನಡೆಸಲು ಥೈಲ್ಯಾಂಡ್ನಿಂದ ಯುವತಿಯರನ್ನು ಕರೆಸುತ್ತಿದ್ದನು. ಬೋಗಾದಿ ರಿಂಗ್ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ದಂಧೆ ನಡೆಸಲಾಗುತ್ತಿತ್ತು. ಹೆಚ್ಚಿನ ಹಣ ಪಡೆಯಲು ಪ್ರತಿ ಗ್ರಾಹಕನಿಂದ 8,000 ರಿಂದ 10,000 ರೂಪಾಯಿಗಳ ವಸೂಲಿ ಮಾಡಲಾಗುತ್ತಿತ್ತು.
ಪೊಲೀಸರ ದಾಳಿ
ವಿಶ್ವಾಸಾರ್ಹ ಮಾಹಿತಿ ಆಧಾರದ ಮೇಲೆ ಶನಿವಾರ ಪೋಲೀಸರು ಹೋಟೆಲ್ ಮೇಲೆ ದಾಳಿ ನಡೆಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು ರತನ್ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ನಂತರ ಹೊಸ ವಿಚಾರಗಳು ಹೊರಬಿದ್ದಿವೆ
ಥೈಲ್ಯಾಂಡ್ನಿಂದ ಬಂದಿದ್ದ ಯುವತಿಯರನ್ನು ವಿಚಾರಣೆ ನಡೆಸಿದಾಗ, ಅವರು ಮೈಸೂರಿಗೆ ವ್ಯವಹಾರ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಮೈಸೂರಿಗೆ ಅವರು ಬಂದಿದ್ದು ದಾಳಿ ನಡೆದ ದಿನಕ್ಕಿಂತ ಒಂದು ದಿನದಷ್ಟೇ ಮುಂಚೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…