Latest

ಮನೆ ಕಳ್ಳತನ ಪ್ರಕರಣ:ಕಳ್ಳನಿಗೆ ಹೆಡೆಮುರಿ ಕಟ್ಟಿದ ತಾವರಗೇರಾ ಪೊಲೀಸರು.

ತಾವರಗೇರಾ:- ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಪಟ್ಟಣದ ವಿಶ್ವೇಶ್ವರಯ್ಯ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳನನ್ನು ಹಿಡಿಯುವಲ್ಲಿ ತಾವರಗೇರಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿತನು 47 ಗ್ರಾಂ ತೂಕದ ಬಂಗಾರದ ಒಡವೆಗಳು ಹಾಗೂ 260 ಗ್ರಾಂ ತೂಕದ ಬೆಳ್ಳಿ ಒಡವೆಗಳನ್ನು ತಾವರಗೇರಾ ಪಟ್ಟಣದ ವಿಶ್ವೇಶ್ವರಯ್ಯ ನಗರದಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ,ಕಳ್ಳನನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಆರೋಪಿತನ ಪತ್ತೆಗಾಗಿ ಶ್ರೀ ಡಾ.ರಾಮ್ ಎಲ್ ಅರಸಿದ್ಧಿ,ಐಪಿಎಸ್ ಪೊಲೀಸ್ ಅಧೀಕ್ಷಕರು ಕೊಪ್ಪಳ,ಶ್ರೀ ಆರ್.ಹೇಮಂತಕುಮಾರ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೊಪ್ಪಳ,ಶ್ರೀ ಸಿದ್ಧಲಿಂಗಪ್ಪಗೌಡ ಪಾಟೀಲ್ ಪೊಲೀಸ್ ಉಪಾಧಿಕ್ಷಕರು ಗಂಗಾವತಿ ಉಪ ವಿಭಾಗ ಹಾಗೂ ಶ್ರೀ ಯಶವಂತ ಬಿಸನಳ್ಳಿ ಸಿಪಿಐ ಕುಷ್ಟಗಿ ವೃತ್ತ ರವರ ಮಾರ್ಗದರ್ಶನದಲ್ಲಿ ಶ್ರೀ ನಾಗರಾಜ ಕೊಟಗಿ ಪಿಎಸ್ಐ ತಾವರಗೇರಾ ಪೊಲೀಸ್ ಠಾಣೆ,ಶ್ರೀ ಈರಪ್ಪ ಎಎಸ್ಐ,ಶ್ರೀ ಬಸವರಾಜ್ ಹೆಚ್. ಸಿ,ಶ್ರೀ ಮಹಮ್ಮದ್ ರಫಿ ಹೆಚ್. ಸಿ,ಶ್ರೀ ಶರಣಪ್ಪ ಸಿಪಿಸಿ,ಶ್ರೀ ಯಮನಪ್ಪ ಸಿಪಿಸಿ,ಶ್ರೀ ಹನುಮಂತ ಸಿಪಿಸಿ,ಶ್ರೀ ಹನಮಗೌಡ ಸಿಪಿಸಿ,ವಾಹನ ಚಾಲಕರಾದ ಶ್ರೀ ತಿಪ್ಪಣ್ಣ ಎಪಿಸಿ,ತಾಂತ್ರಿಕ ವಿಭಾಗದ ಶ್ರೀ ಪ್ರಸಾದ್ ಎಪಿಸಿ ಹಾಗೂ ಶ್ರೀ ಮಂಜುನಾಥ್ ಎಪಿಸಿ ಇವರನ್ನೊಳಗೊಂಡು ತಂಡವನ್ನು ರಚಿಸಿ ಕಳ್ಳತನ ಮಾಡಿದ ಕಳ್ಳನ ಪತ್ತೆಗೆ ಬಲೆ ಬೀಸಿದ್ದರು.

ಪ್ರಕರಣ ಪತ್ತೆ ಕಾರ್ಯಕ್ಕೆ ನೇಮಕ ಮಾಡಿದ ತನಿಖಾ ತಂಡವು ಆರೋಪಿತನ ಸುಳಿವು ಕುರಿತು ಮಾಹಿತಿ ಸಂಗ್ರಹಿಸಿ ದಿನಾಂಕ 22-03-2025 ರಂದು ಆರೋಪಿ ತಾಹೀರ್ ಅಲಿ ಇರಾನಿ ತಂದೆ ಅಸದ ಅಲಿ ಎಸ್.ಎಂ.ವಯಸ್ಸು 52 ವರ್ಷ,ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು,ಗದಗ ನಗರದ ವಾರ್ಡ್ ನಂ -1 ಎಸ್.ಎಂ.ಕೃಷ್ಣ ನಗರದಲ್ಲಿ ವಾಸವಾಗಿದ್ದು,ಈತನನ್ನು ಪತ್ತೆ ಮಾಡಿ ಸದರಿಯವನಿಗೆ ವಿಚಾರಣೆಗೆ ಒಳಪಡಿಸಿ ಆರೋಪಿತನು ಕಳ್ಳತನ ಮಾಡಿರುವ ತಾವರಗೇರಾ ಪೊಲೀಸ್ ಠಾಣೆಯ ಎರಡು ಹಗಲು ಮನೆಗಳ್ಳತನ ಪತ್ತೆ ಮಾಡಿ ಆರೋಪಿತನ ತಾಬಾದಿಂದ ಒಟ್ಟು 47 ಗ್ರಾಂ ತೂಕದ ಬಂಗಾರದ ಒಡವೆಗಳು ಒಟ್ಟು ಅಂದಾಜು 3,80,000/- ಹಾಗೂ 260 ಗ್ರಾಂ ತೂಕದ ಬೆಳ್ಳಿ ಒಡವೆಗಳು ಅಂದಾಜು 23,400/- ಹೀಗೆ ಒಟ್ಟು 4,03,400/- ರೂಪಾಯಿ ಬೆಲೆ ಬಾಳುವ ಬಂಗಾರ ಹಾಗೂ ಬೆಳ್ಳಿ ಒಡವೆಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿರುತ್ತಾರೆ.

ತನಿಖಾ ತಂಡದ ಕಾರ್ಯವನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೊಪ್ಪಳ ಜಿಲ್ಲೆ ರವರು ಪ್ರಶಂಶಿಸಿ ಬಹುಮಾನ ಘೋಷಿಸಿರುತ್ತಾರೆ.

ವರದಿ:- ಮಣಿಕಂಠ. ಬಿ.

ಭ್ರಷ್ಟರ ಬೇಟೆ

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

32 minutes ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

35 minutes ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

36 minutes ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

37 minutes ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

39 minutes ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

40 minutes ago