Latest

ಮನೆ ಕಳ್ಳತನ ಪ್ರಕರಣ:ಕಳ್ಳನಿಗೆ ಹೆಡೆಮುರಿ ಕಟ್ಟಿದ ತಾವರಗೇರಾ ಪೊಲೀಸರು.

ತಾವರಗೇರಾ:- ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಪಟ್ಟಣದ ವಿಶ್ವೇಶ್ವರಯ್ಯ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳನನ್ನು ಹಿಡಿಯುವಲ್ಲಿ ತಾವರಗೇರಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿತನು 47 ಗ್ರಾಂ ತೂಕದ ಬಂಗಾರದ ಒಡವೆಗಳು ಹಾಗೂ 260 ಗ್ರಾಂ ತೂಕದ ಬೆಳ್ಳಿ ಒಡವೆಗಳನ್ನು ತಾವರಗೇರಾ ಪಟ್ಟಣದ ವಿಶ್ವೇಶ್ವರಯ್ಯ ನಗರದಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ,ಕಳ್ಳನನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಆರೋಪಿತನ ಪತ್ತೆಗಾಗಿ ಶ್ರೀ ಡಾ.ರಾಮ್ ಎಲ್ ಅರಸಿದ್ಧಿ,ಐಪಿಎಸ್ ಪೊಲೀಸ್ ಅಧೀಕ್ಷಕರು ಕೊಪ್ಪಳ,ಶ್ರೀ ಆರ್.ಹೇಮಂತಕುಮಾರ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೊಪ್ಪಳ,ಶ್ರೀ ಸಿದ್ಧಲಿಂಗಪ್ಪಗೌಡ ಪಾಟೀಲ್ ಪೊಲೀಸ್ ಉಪಾಧಿಕ್ಷಕರು ಗಂಗಾವತಿ ಉಪ ವಿಭಾಗ ಹಾಗೂ ಶ್ರೀ ಯಶವಂತ ಬಿಸನಳ್ಳಿ ಸಿಪಿಐ ಕುಷ್ಟಗಿ ವೃತ್ತ ರವರ ಮಾರ್ಗದರ್ಶನದಲ್ಲಿ ಶ್ರೀ ನಾಗರಾಜ ಕೊಟಗಿ ಪಿಎಸ್ಐ ತಾವರಗೇರಾ ಪೊಲೀಸ್ ಠಾಣೆ,ಶ್ರೀ ಈರಪ್ಪ ಎಎಸ್ಐ,ಶ್ರೀ ಬಸವರಾಜ್ ಹೆಚ್. ಸಿ,ಶ್ರೀ ಮಹಮ್ಮದ್ ರಫಿ ಹೆಚ್. ಸಿ,ಶ್ರೀ ಶರಣಪ್ಪ ಸಿಪಿಸಿ,ಶ್ರೀ ಯಮನಪ್ಪ ಸಿಪಿಸಿ,ಶ್ರೀ ಹನುಮಂತ ಸಿಪಿಸಿ,ಶ್ರೀ ಹನಮಗೌಡ ಸಿಪಿಸಿ,ವಾಹನ ಚಾಲಕರಾದ ಶ್ರೀ ತಿಪ್ಪಣ್ಣ ಎಪಿಸಿ,ತಾಂತ್ರಿಕ ವಿಭಾಗದ ಶ್ರೀ ಪ್ರಸಾದ್ ಎಪಿಸಿ ಹಾಗೂ ಶ್ರೀ ಮಂಜುನಾಥ್ ಎಪಿಸಿ ಇವರನ್ನೊಳಗೊಂಡು ತಂಡವನ್ನು ರಚಿಸಿ ಕಳ್ಳತನ ಮಾಡಿದ ಕಳ್ಳನ ಪತ್ತೆಗೆ ಬಲೆ ಬೀಸಿದ್ದರು.

ಪ್ರಕರಣ ಪತ್ತೆ ಕಾರ್ಯಕ್ಕೆ ನೇಮಕ ಮಾಡಿದ ತನಿಖಾ ತಂಡವು ಆರೋಪಿತನ ಸುಳಿವು ಕುರಿತು ಮಾಹಿತಿ ಸಂಗ್ರಹಿಸಿ ದಿನಾಂಕ 22-03-2025 ರಂದು ಆರೋಪಿ ತಾಹೀರ್ ಅಲಿ ಇರಾನಿ ತಂದೆ ಅಸದ ಅಲಿ ಎಸ್.ಎಂ.ವಯಸ್ಸು 52 ವರ್ಷ,ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು,ಗದಗ ನಗರದ ವಾರ್ಡ್ ನಂ -1 ಎಸ್.ಎಂ.ಕೃಷ್ಣ ನಗರದಲ್ಲಿ ವಾಸವಾಗಿದ್ದು,ಈತನನ್ನು ಪತ್ತೆ ಮಾಡಿ ಸದರಿಯವನಿಗೆ ವಿಚಾರಣೆಗೆ ಒಳಪಡಿಸಿ ಆರೋಪಿತನು ಕಳ್ಳತನ ಮಾಡಿರುವ ತಾವರಗೇರಾ ಪೊಲೀಸ್ ಠಾಣೆಯ ಎರಡು ಹಗಲು ಮನೆಗಳ್ಳತನ ಪತ್ತೆ ಮಾಡಿ ಆರೋಪಿತನ ತಾಬಾದಿಂದ ಒಟ್ಟು 47 ಗ್ರಾಂ ತೂಕದ ಬಂಗಾರದ ಒಡವೆಗಳು ಒಟ್ಟು ಅಂದಾಜು 3,80,000/- ಹಾಗೂ 260 ಗ್ರಾಂ ತೂಕದ ಬೆಳ್ಳಿ ಒಡವೆಗಳು ಅಂದಾಜು 23,400/- ಹೀಗೆ ಒಟ್ಟು 4,03,400/- ರೂಪಾಯಿ ಬೆಲೆ ಬಾಳುವ ಬಂಗಾರ ಹಾಗೂ ಬೆಳ್ಳಿ ಒಡವೆಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿರುತ್ತಾರೆ.

ತನಿಖಾ ತಂಡದ ಕಾರ್ಯವನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೊಪ್ಪಳ ಜಿಲ್ಲೆ ರವರು ಪ್ರಶಂಶಿಸಿ ಬಹುಮಾನ ಘೋಷಿಸಿರುತ್ತಾರೆ.

ವರದಿ:- ಮಣಿಕಂಠ. ಬಿ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

8 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

15 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

15 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago