ದಾವಣಗೆರೆ: ಹರಿಹರ ಪಟ್ಟಣದ ವಿದ್ಯಾನಗರದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಊರಿಗೆ ತೆರಳಿದ್ದ ಪೊಲೀಸರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯನಾಯ್ಕ ಅವರ ನಿವಾಸವಿದು.
ಮಾರ್ಚ್ 29ರಂದು ಕುಟುಂಬದೊಂದಿಗೆ ಯುಗಾದಿ ಆಚರಿಸಲು ಊರಿಗೆ ತೆರಳಿದ್ದ ಜಯನಾಯ್ಕ ಅವರು, ರಾತ್ರಿ ಪಾಳಿ ಕರ್ತವ್ಯದ ನಿಮಿತ್ತ ಮರಳಿ ಬಂದು ಮನೆಗೆ ಬೀಗ ಹಾಕಿ ತೆರಳಿದ್ದರು. 9.30ರ ಹೊತ್ತಿಗೆ ಮನೆಗೆ ಹಿಂದಿರುಗಿದಾಗ ಗೇಟ್ ಮತ್ತು ಬಾಗಿಲಿನ ಇಂಟರ್ ಲಾಕ್ ಮುರಿದು ಹಾಕಿರುವುದು ಗಮನಕ್ಕೆ ಬಂತು. ತಕ್ಷಣಕ್ಕೆ ಒಳಗೆ ಪರಿಶೀಲಿಸಿದಾಗ ಸುಮಾರು 60.5 ಗ್ರಾಂ ತೂಕದ ಚಿನ್ನಾಭರಣಗಳು – ಚೈನ್ ಸರ, ಉಂಗುರ, ಬ್ರಾಸ್ ಲೇಟು, ಕಿವಿಓಲೆಗಳು ಹಾಗೂ ರೂ. 50,000 ನಗದು ಕಳ್ಳತನಗೊಂಡಿರುವುದು ಗೊತ್ತಾಗಿದೆ.
ಒಟ್ಟು ರೂ. 5.3 ಲಕ್ಷ ಮೌಲ್ಯದ ಆಸ್ತಿ ಕಳ್ಳತನಗೊಂಡಿದ್ದು, ಈ ಸಂಬಂಧ ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕಳ್ಳರ ಪತ್ತೆಗಾಗಿ ಸಿಸಿಟಿವಿ ಫುಟೇಜ್ಗಳ ಪರಿಶೀಲನೆ ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಹಬ್ಬದ ಸಂದರ್ಭದಲ್ಲಿ ಖಾಲಿ ಮನೆಗಳನ್ನು ಗುರಿಯಾಗಿಸುವ ಕಳ್ಳರ ಚಟುವಟಿಕೆ ಮತ್ತೊಮ್ಮೆ ಮರುಕಳಿಸಿರುವ ಈ ಘಟನೆ, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು…
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಪತ್ನಿಯೇ ಪತಿಯ ಕ್ರೌರ್ಯಕ್ಕೆ ಬಲಿಯಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪಕ್ಕದ ಮನೆಯ ಯುವತಿಯೊಂದಿಗೆ ಹೊಂದಿದ್ದ…
ಮೈಸೂರಿನಲ್ಲಿ ದಂಪತಿ ನಡುವಿನ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಉಂಟಾದ ಜಗಳದಲ್ಲಿ ಪತ್ನಿಯೇ ಗಂಡನನ್ನು…
UPSC ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಕನಸು ಲಕ್ಷಾಂತರ ಯುವಕರದ್ದಾಗಿದ್ದರೂ, ಅದನ್ನು ನನಸು ಮಾಡುವುದು ಕೆಲವೇ ಮಂದಿಗೆ ಸಾಧ್ಯವಾಗುತ್ತದೆ. ಹಲವು ಮಂದಿ…
ಬಿಹಾರದ ಒಂದು ಸಣ್ಣ ಹಳ್ಳಿಯಿಂದ ಆರಂಭವಾದ ಪ್ರಯಾಣ, ಇಂದು ದೇಶದ ಅತ್ಯುನ್ನತ ನಾಗರಿಕ ಸೇವೆಯಾದ ಐಎಎಸ್ ಹುದ್ದೆ ತಲುಪಿದೆ. ದೃಢ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ…