Latest

ಯುಗಾದಿ ಹಬ್ಬದ ಸಂದರ್ಭದಲ್ಲಿ ಮನೆ ಕಳ್ಳತನ: ಪೊಲೀಸ್ ಕಾನ್ಸ್ಟೇಬಲ್ ಮನೆಯಲ್ಲಿ 5.3 ಲಕ್ಷ ಮೌಲ್ಯದ ಚಿನ್ನ, ದೋಚಿದ ಕಳ್ಳರು

ದಾವಣಗೆರೆ: ಹರಿಹರ ಪಟ್ಟಣದ ವಿದ್ಯಾನಗರದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಊರಿಗೆ ತೆರಳಿದ್ದ ಪೊಲೀಸರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯನಾಯ್ಕ ಅವರ ನಿವಾಸವಿದು.

ಮಾರ್ಚ್ 29ರಂದು ಕುಟುಂಬದೊಂದಿಗೆ ಯುಗಾದಿ ಆಚರಿಸಲು ಊರಿಗೆ ತೆರಳಿದ್ದ ಜಯನಾಯ್ಕ ಅವರು, ರಾತ್ರಿ ಪಾಳಿ ಕರ್ತವ್ಯದ ನಿಮಿತ್ತ ಮರಳಿ ಬಂದು ಮನೆಗೆ ಬೀಗ ಹಾಕಿ ತೆರಳಿದ್ದರು. 9.30ರ ಹೊತ್ತಿಗೆ ಮನೆಗೆ ಹಿಂದಿರುಗಿದಾಗ ಗೇಟ್ ಮತ್ತು ಬಾಗಿಲಿನ ಇಂಟರ್ ಲಾಕ್ ಮುರಿದು ಹಾಕಿರುವುದು ಗಮನಕ್ಕೆ ಬಂತು. ತಕ್ಷಣಕ್ಕೆ ಒಳಗೆ ಪರಿಶೀಲಿಸಿದಾಗ ಸುಮಾರು 60.5 ಗ್ರಾಂ ತೂಕದ ಚಿನ್ನಾಭರಣಗಳು – ಚೈನ್ ಸರ, ಉಂಗುರ, ಬ್ರಾಸ್ ಲೇಟು, ಕಿವಿಓಲೆಗಳು ಹಾಗೂ ರೂ. 50,000 ನಗದು ಕಳ್ಳತನಗೊಂಡಿರುವುದು ಗೊತ್ತಾಗಿದೆ.

ಒಟ್ಟು ರೂ. 5.3 ಲಕ್ಷ ಮೌಲ್ಯದ ಆಸ್ತಿ ಕಳ್ಳತನಗೊಂಡಿದ್ದು, ಈ ಸಂಬಂಧ ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕಳ್ಳರ ಪತ್ತೆಗಾಗಿ ಸಿಸಿಟಿವಿ ಫುಟೇಜ್‌ಗಳ ಪರಿಶೀಲನೆ ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಹಬ್ಬದ ಸಂದರ್ಭದಲ್ಲಿ ಖಾಲಿ ಮನೆಗಳನ್ನು ಗುರಿಯಾಗಿಸುವ ಕಳ್ಳರ ಚಟುವಟಿಕೆ ಮತ್ತೊಮ್ಮೆ ಮರುಕಳಿಸಿರುವ ಈ ಘಟನೆ, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.

nazeer ahamad

Recent Posts

ಮೋದಿ ಭೇಟಿ ಮುನ್ನ ಜಿಲೆಟಿನ್-ಟೈಮರ್ ಪತ್ತೆ! ಉಗ್ರ ಸಂಚೋ? ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…

23 hours ago

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್…

1 day ago

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…

2 days ago

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

2 days ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 days ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

3 days ago