ಕಾಮಸಮುದ್ರಂ: ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂದರ್ಭ ಪೊಲೀಸರು ರೂ.6.70 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಏಪ್ರಿಲ್ 4 ರಂದು, ಪೊಲೇನಹಳ್ಳಿ ಗ್ರಾಮದ ನಿವಾಸಿ ಮುನಿವೆಂಕಟಪ್ಪ ಅವರು ತಮ್ಮ ಮನೆಯಲ್ಲಿ ನಡೆದಿದ್ದ ಕಳ್ಳತನ ಕುರಿತು ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಡಿವೈಎಸ್ಪಿ ಎಸ್. ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಜಿ.ಸಿ. ನಾರಾಯಣಸ್ವಾಮಿ ಮತ್ತು ಪಿಎಸ್ಐ ಬಿ.ವಿ. ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಿದರು.
ತೀವ್ರ ಪರಿಶೋಧನೆ ಹಾಗೂ ತಂತ್ರಬದ್ಧ ಕಾರ್ಯಾಚರಣೆಯ ನಂತರ, ಬಂಗಾರಪೇಟೆ ತಾಲ್ಲೂಕಿನ ಶಿವಲಿಂಗ ಗ್ರಾಮದ ನಿವಾಸಿ ಚಂದ್ರಪ್ಪ ಎಂಬಾತನನ್ನು ಬಂಧಿಸಲಾಯಿತು. ತನಿಖೆಯಲ್ಲಿ ಆತನ ವಿರುದ್ಧ ಕಾಮಸಮುದ್ರಂ ಹಾಗೂ ಬಂಗಾರಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯ ಪಾತ್ರವಿದೆ ಎಂಬುದು ದೃಢಪಟ್ಟಿದೆ. ಆರೋಪಿಯಿಂದ ಒಟ್ಟು 69 ಗ್ರಾಂ ಚಿನ್ನಾಭರಣಗಳು ವಶಪಡಿಸಲ್ಪಟ್ಟಿದ್ದು, ಮೌಲ್ಯ ರೂ.6,70,000ಕ್ಕೆ ಸಮಾನವಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ಕಿರಣ್ ಕುಮಾರ್ ಅವರೊಂದಿಗೆ ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮಂಜುನಾಥರೆಡ್ಡಿ, ಮುನಾವರ್ ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷ್ಮಣ ತೇಲಿ ಮತ್ತು ಜೀಪ್ ಚಾಲಕ ಗುರುಮೂರ್ತಿ ಪ್ರಮುಖ ಪಾತ್ರವಹಿಸಿದ್ದರು. ಅವರ ಶ್ರಮವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅಭಿನಂದಿಸಿದ್ದಾರೆ.
ವರದಿ: ರೋಷನ್ ಜಮೀರ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…