Latest

ಗೃಹಿಣಿ ಅನುಮಾನಾಸ್ಪದ ಸಾವು…! ಮರ್ಯಾದಾ ಹತ್ಯೆ ಶಂಕೆ…? ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗೊಂದು ತಡವಾಗಿ ಕೇಳಿ ಬಂದಿದೆ.ಕಳೆದ 5 ತಿಂಗಳ ಹಿಂದೆ
ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮ್ರತಳ ಪತಿ ಹಾಗೂ ಆಕೆಯ ತಮ್ಮ ಇಬ್ಬರೂ ಸೇರಿ ಹತ್ಯೆ ಮಾಡಿರಬಹುದೆಂಬ ಶಂಕೆಯನ್ನ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಹುಲ್ಲಹಳ್ಳಿ ಠಾಣೆ ಪೊಲೀಸರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ಕೈಗೊಳ್ಳಬೇಕಿದೆ.
ದುಗ್ಗಹಳ್ಳಿ ಗ್ರಾಮದ ಸುಚಿತ್ರ(38) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ.ಈಕೆಯ ಪತಿ ರವಿ ಹಾಗೂ ಈಕೆಯ ತಮ್ಮ ಸತೀಶ ಸೇರಿ ಕೊಲೆ ಮಾಡಿ ಪ್ರಕರಣವನ್ನ ಮುಚ್ಚಿಹಾಕಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
5 ತಿಂಗಳ ಹಿಂದೆ ಇದ್ದಕ್ಕಿದ್ದಂತೆ ಸುಚಿತ್ರಾ ಸಾವನ್ನಪ್ಪಿದ ಬಗ್ಗೆ ಹಲವಾರು ಅನುಮಾನದ ಹುತ್ತ ಎದ್ದಿದೆ.
ಸುಮಾರು 15 ವರ್ಷಗಳ ಹಿಂದೆ ದುಗ್ಗಹಳ್ಳಿ ಗ್ರಾಮದ ಸುಚಿತ್ರಾಳನ್ನ ಏಚಗುಂಡ್ಲ ಗ್ರಾಮದ ಸೋದರ ಮಾವ ರವಿ ಜೊತೆ ಅದ್ದೂರಿಯಾಗಿ ವಿವಾಹ ಮಾಡಿಕಕೊಡಲಾಗಿತ್ತು.
ದಂಪತಿಗೆ ಇಬ್ಬರು ಮಕ್ಕಳೂ ಸಹ ಇದ್ದಾರೆ.ಮೂರ್ನಾಲ್ಕು ವರ್ಷಗಳಿಂದ ಸುಚಿತ್ರಾ ನಡತೆಯ ಬಗ್ಗೆ ಪತಿ ರವಿಗೆ ಅನುಮಾನ ಬಂದಿದ್ದು ಪಕ್ಕದ ಬಡಾವಣೆಯ ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಅಕ್ರಮ ಸಂಪರ್ಕ ಇಟ್ಟುಕೊಂಡಿರುವ ಮಾಹಿತಿ ಪತಿ ರವಿಗೆ ತಿಳಿದು ಬಂದಿದೆ ಎನ್ನ ಲಾಗಿದ್ದು .
ಈ ವಿಚಾರವನ್ನ ರವಿ ತನ್ನ ಭಾವಮೈದ ಸತೀಶ್ ಜೊತೆ ಹೇಳಿಕೊಂಡಿದ್ದಾನೆ. ಕೆಲವು ದಿನಗಳ ಕಾಲ ಸುಚಿತ್ರಾಳನ್ನ ಫಾಲೋ ಮಾಡಿದ ಪತಿ ಹಾಗೂ ತಮ್ಮನಿಗೆ ಅನ್ಯಕೋಮಿನ ಪುರುಷನ ಜೊತೆ ಅಕ್ರಮ ಸಂಬಂಧ ಇರುವುದು ಖಚಿತವಾಗಿದೆ.
ಈ ಕಾರಣಕ್ಕಾಗಿ ರವಿ ತನ್ನ ಪತ್ನಿ ಸುಚಿತ್ರ ಹಾಗೂ ಮಕ್ಕಳನ್ನ ಭಾವಮೈದ ಸತೀಶನ ಮನೆ ದುಗ್ಗಹಳ್ಳಿಗೆ ಕರೆದುಕೊಂಡು ಹೋಗಿದ್ದಾನೆ
.22-07-2024 ರಂದು ಸತೀಶ ಹೊಸದಾಗಿ ನಿರ್ಮಿಸಿರುವ ಕೋಳಿಫಾರಂ ನಲ್ಲಿ ಸುಚಿತ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿರುತ್ತಾಳೆ .
ಈ ವಿಚಾರವನ್ನ ಪೊಲೀಸರಿಗೂ ತಿಳಿಸದೆ ಗ್ರಾಮಸ್ಥರ ಗಮನಕ್ಕೂ ತರದೆ ಏಕಾ ಏಕಿ ಮೃತದೇಹವನ್ನ ಏಚಗುಂಡ್ಲ ಗ್ರಾಮಕ್ಕೆ ಕೊಂಡೊಯ್ದು ತರಾತುರಿಯಲ್ಲಿ ಅಂತ್ಯಕ್ರಿಯೆ ಮಾಡಿ ಕೈತೊಳೆದುಕೊಂಡಿದ್ದಾರೆ.
ಆರಂಭದಲ್ಲಿ ಕಿಂಚಿತ್ತು ಸುಳಿವು ನೀಡದ ಸತೀಶ ಕೆಲವು ದಿನಗಳ ನಂತರ ರಾಜಾರೋಷವಾಗಿ ನಾನೆ ಸಾಯಿಸಿದ್ದೀನಿ ಎಂದು ಹೇಳಿಕೊಂಡು ತಿರುಗಾಡುತ್ತಿರುವುದು ಗ್ರಾಮದ ಜನರ ಕಿವಿಗೆ ಬಿದ್ದಿದೆ
ಸುಚಿತ್ರಾ ಆರೋಗ್ಯವಾಗಿದ್ದರೂ ಸಾವನ್ನಪ್ಪಿದ್ದು ಹೇಗೆ ? ಎಂಬ ಪ್ರಶ್ನೆ ಈಗ ಸ್ಥಳೀಯರದಾಗಿದ್ದು.ಆತ್ಮಹತ್ಯೆ ಆಗಿದ್ದಲ್ಲಿ ಪೊಲೀಸರಿಗೂ ತಿಳಿಸದೆ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದು ಏಕೆ..? ಗ್ರಾಮದ ಜನತೆಯನ್ನ ದೂರವಿರಿಸಿ ಮೃತದೇಹವನ್ನ ಸುಟ್ಟು ಹಾಕಿರುವುದು ಏಕೆ ಎಂಬ ಅನುಮಾನಗಳಿಗೆ ಪುಷ್ಠಿ ನೀಡುತ್ತಿದೆ.
ಈ ಸಾವಿಗೆ ಹೆತ್ತ ಪೋಷಕರಾದ ಶಿವರಾಜಪ್ಪ,ಪ್ರೇಮ ರವರ ಪಾತ್ರವೂ ಇದೆ ಎಂದು ಹೇಳಲಾಗುತ್ತಿದೆ.
ಅನ್ಯಕೋಮಿನ ವ್ಯಕ್ತಿಯೊಡನೆ ಅಕ್ರಮ ಸಂಬಂಧ ಬೆಳೆಸಿದ್ದೇ ಸುಚಿತ್ರ ಸಾವಿಗೆ ಕಾರಣವಾಯ್ತೇ…? ತರಾತುರಿಯಲ್ಲಿ ಅಂತ್ಯೆಕ್ರಿಯೆ ನಡೆಸಿದ್ದಾದರೂ ಏಕೆ..?ರಾಜಾರೋಷವಾಗಿ ತಾನೇ ಕೊಲೆ ಮಾಡಿರುವುದಾಗಿ ಹೇಳುತ್ತಿರುವ ಸತೀಶನ ಇಂಗಿತವಾದರೂ ಏನು…? ಇವೆಲ್ಲಾ ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದ ಉತ್ತರ ಸಿಗಬೇಕಿದೆ.
ಆದಷ್ಟೂ ಶೀಘ್ರದಲ್ಲಿ ಮೃತಳ ತಮ್ಮ ಸತೀಶ ಹಾಗೂ ಪತಿ ರವಿಯನ್ನ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರೆ ಹತ್ಯೆಯ ಪ್ರಕರಣ ಬೆಳಕಿಗೆ ಬರುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವರದಿ: ಮೋಹನ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago