Latest

ಹುಬ್ಬಳ್ಳಿ ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ವೃದ್ಧ ಬಲಿ: ಸಾಲದ ಕಿರುಕುಳಕ್ಕೆ ನೇಣಿಗೆ ಶರಣು

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ರಾಜ್ಯದಾದ್ಯಂತ ಅಸಂಖ್ಯ ಪ್ರಕರಣಗಳು ವರದಿಯಾಗುತ್ತಿರುವ ವೇಳೆ, ಮತ್ತೊಂದು ದುರಂತ ಸುದ್ದಿ ಹುಬ್ಬಳ್ಳಿಯಿಂದ ಬಂದಿದೆ. ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ 65 ವರ್ಷದ ಭಾಷಾ ಸಾಬ್ ಸಂಕೇಶ್ವರ ಅವರು, ಸಾಲದ ಬಾಧೆಯಿಂದ ಬಳಲುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಲೀಸ್ ಮಾಹಿತಿ ಪ್ರಕಾರ, ಭಾಷಾ ಸಾಬ್ ಅವರು ಲಲಿತ, ಕಿಟ್ಯಾ, ವಿನೋದ್ ಬಂಕಾಪುರ ಮತ್ತು ಅಶ್ಪಾಕ್ ಎಂಬವರಿಗೆ ಸಾಲಿಯಾಗಿದ್ದರು. ಇವರಿಂದ ನಿರಂತರವಾಗಿ ಹಣ ವಾಪಸು ಮಾಡುವ ದಬ್ಬಾಳಿಕೆಗೆ ಒಳಗಾಗುತ್ತಾ, ಮಾನುಷ್ಯತ್ವದ ಮಿತಿಯನ್ನು ಮೀರುವಂತೆ ಕಿರುಕುಳ ಎದುರಿಸುತ್ತಿದ್ದ ಅವರು ಕೊನೆಗೆ ಜೀವನಬದೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಆತ್ಮಹತ್ಯೆಗೆ ಮುನ್ನ, ದೈನಂದಿನ ಕಿರುಕುಳ ವಿವರಿಸುವ ವಿಡಿಯೋ  ಮಾಡಿ, ಅದರಲ್ಲಿ ಇವರಿಂದ ನಡೆಯುತ್ತಿರುವ ದೌರ್ಜನ್ಯವನ್ನು ಬಹಿರಂಗಪಡಿಸಿದ್ದಾರೆ. ಬಳಿಕ ಮನೆಯಲ್ಲೇ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ನವ ಕಾನೂನು ಜಾರಿಗೊಳಿಸಿದ್ದರೂ, ಸಾಲದ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆ ಈಗಲೂ ಮುಂದುವರೆದಿರುವುದು ಆತಂಕದ ವಿಚಾರವಾಗಿದೆ. ಜನಸಾಮಾನ್ಯರ ಬದುಕು ಕದಿಯುತ್ತಿರುವ ಇಂತಹ ದಂಧೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಮತ್ತೆ ಸಾಬೀತಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago