Latest

2ನೇ ದಿನ ಕಬ್ಜ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೌದು, ಬಿಡುಗಡೆ ದಿನ ಪಡೆದುಕೊಂಡಿದ್ದ ಪ್ರದರ್ಶನಗಳ ಸಂಖ್ಯೆಗಿಂತ ಎರಡನೇ ದಿನ ಕಬ್ಜ ಚಿತ್ರ ಹೆಚ್ಚು ಪ್ರದರ್ಶನಗಳನ್ನು ಬೆಂಗಳೂರು ನಗರದಲ್ಲಿ ಪಡೆದುಕೊಂಡಿದೆ. ಮೊದಲ ದಿನ ಬೆಂಗಳೂರಿನಲ್ಲಿ 597 ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಕಬ್ಜ ಚಿತ್ರ ಇಂದು ಎರಡನೇ ದಿನ 623 ಪ್ರದರ್ಶನಗಳನ್ನು ಪಡೆದುಕೊಂಡಿದೆ.
ಈ ರೀತಿ ಈ ವರ್ಷ ತೆರೆಕಂಡ ಯಾವ ಸಿನಿಮಾಗಳೂ ಸಹ ಬೆಂಗಳೂರಿನಲ್ಲಿ ಮೊದಲ ದಿನಕ್ಕಿಂತ ಎರಡನೇ ದಿನ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಂಡಿರಲಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯ ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಚಿತ್ರಗಳು ಎರಡನೇ ದಿನ ಕಡಿಮೆ ಪ್ರದರ್ಶನಗಳನ್ನು ಪಡೆದುಕೊಂಡು ಶೋಗಳನ್ನು ಕಳೆದುಕೊಂಡಿದ್ದವು. ಈ ವರ್ಷ ತೆರೆಕಂಡ ಚಿತ್ರಗಳಲ್ಲಿ ಎರಡನೇ ದಿನ 600ಕ್ಕಿಂತ ಹೆಚ್ಚಿನ ಪ್ರದರ್ಶನಗಳನ್ನು ಬೆಂಗಳೂರಿನಲ್ಲಿ ಪಡೆದುಕೊಂಡ ಏಕೈಕ ಚಿತ್ರ ಎನಿಸಿಕೊಂಡಿದೆ ಕಬ್ಜ.

ಈ ವರ್ಷ ಬಿಡುಗಡೆಯಾದ ಚಿತ್ರಗಳು ಬೆಂಗಳೂರಿನಲ್ಲಿ ಮೊದಲ ದಿನ ಪಡೆದುಕೊಂಡ ಪ್ರದರ್ಶನಗಳ ಸಂಖ್ಯೆ ಈ ಕೆಳಕಂಡಂತಿದೆ..
ಪಠಾಣ್ – 821 ಪ್ರದರ್ಶನಗಳು
ವಾರಿಸು – 757 ಪ್ರದರ್ಶನಗಳು
ಕ್ರಾಂತಿ – 680 ಪ್ರದರ್ಶನಗಳು
ಕಬ್ಜ – 597 ಪ್ರದರ್ಶನಗಳು
ತುನಿವು – 568 ಪ್ರದರ್ಶನಗಳು

ಎರಡನೇ ದಿನ ಈ ಚಿತ್ರಗಳು ಪಡೆದುಕೊಂಡ ಶೋಗಳ ಸಂಖ್ಯೆ
ಪಠಾಣ್ – 563 ಪ್ರದರ್ಶನಗಳು
ವಾರಿಸು – 321 ಪ್ರದರ್ಶನಗಳು
ಕ್ರಾಂತಿ – 583 ಪ್ರದರ್ಶನಗಳು
ಕಬ್ಜ – 623 ಪ್ರದರ್ಶನಗಳು
ತುನಿವು – 300 ಪ್ರದರ್ಶನಗಳು

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

3 hours ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

3 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

4 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

7 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

14 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago