Latest

2ನೇ ದಿನ ಕಬ್ಜ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೌದು, ಬಿಡುಗಡೆ ದಿನ ಪಡೆದುಕೊಂಡಿದ್ದ ಪ್ರದರ್ಶನಗಳ ಸಂಖ್ಯೆಗಿಂತ ಎರಡನೇ ದಿನ ಕಬ್ಜ ಚಿತ್ರ ಹೆಚ್ಚು ಪ್ರದರ್ಶನಗಳನ್ನು ಬೆಂಗಳೂರು ನಗರದಲ್ಲಿ ಪಡೆದುಕೊಂಡಿದೆ. ಮೊದಲ ದಿನ ಬೆಂಗಳೂರಿನಲ್ಲಿ 597 ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಕಬ್ಜ ಚಿತ್ರ ಇಂದು ಎರಡನೇ ದಿನ 623 ಪ್ರದರ್ಶನಗಳನ್ನು ಪಡೆದುಕೊಂಡಿದೆ.
ಈ ರೀತಿ ಈ ವರ್ಷ ತೆರೆಕಂಡ ಯಾವ ಸಿನಿಮಾಗಳೂ ಸಹ ಬೆಂಗಳೂರಿನಲ್ಲಿ ಮೊದಲ ದಿನಕ್ಕಿಂತ ಎರಡನೇ ದಿನ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಂಡಿರಲಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯ ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಚಿತ್ರಗಳು ಎರಡನೇ ದಿನ ಕಡಿಮೆ ಪ್ರದರ್ಶನಗಳನ್ನು ಪಡೆದುಕೊಂಡು ಶೋಗಳನ್ನು ಕಳೆದುಕೊಂಡಿದ್ದವು. ಈ ವರ್ಷ ತೆರೆಕಂಡ ಚಿತ್ರಗಳಲ್ಲಿ ಎರಡನೇ ದಿನ 600ಕ್ಕಿಂತ ಹೆಚ್ಚಿನ ಪ್ರದರ್ಶನಗಳನ್ನು ಬೆಂಗಳೂರಿನಲ್ಲಿ ಪಡೆದುಕೊಂಡ ಏಕೈಕ ಚಿತ್ರ ಎನಿಸಿಕೊಂಡಿದೆ ಕಬ್ಜ.

ಈ ವರ್ಷ ಬಿಡುಗಡೆಯಾದ ಚಿತ್ರಗಳು ಬೆಂಗಳೂರಿನಲ್ಲಿ ಮೊದಲ ದಿನ ಪಡೆದುಕೊಂಡ ಪ್ರದರ್ಶನಗಳ ಸಂಖ್ಯೆ ಈ ಕೆಳಕಂಡಂತಿದೆ..
ಪಠಾಣ್ – 821 ಪ್ರದರ್ಶನಗಳು
ವಾರಿಸು – 757 ಪ್ರದರ್ಶನಗಳು
ಕ್ರಾಂತಿ – 680 ಪ್ರದರ್ಶನಗಳು
ಕಬ್ಜ – 597 ಪ್ರದರ್ಶನಗಳು
ತುನಿವು – 568 ಪ್ರದರ್ಶನಗಳು

ಎರಡನೇ ದಿನ ಈ ಚಿತ್ರಗಳು ಪಡೆದುಕೊಂಡ ಶೋಗಳ ಸಂಖ್ಯೆ
ಪಠಾಣ್ – 563 ಪ್ರದರ್ಶನಗಳು
ವಾರಿಸು – 321 ಪ್ರದರ್ಶನಗಳು
ಕ್ರಾಂತಿ – 583 ಪ್ರದರ್ಶನಗಳು
ಕಬ್ಜ – 623 ಪ್ರದರ್ಶನಗಳು
ತುನಿವು – 300 ಪ್ರದರ್ಶನಗಳು

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago