Latest

2ನೇ ದಿನ ಕಬ್ಜ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೌದು, ಬಿಡುಗಡೆ ದಿನ ಪಡೆದುಕೊಂಡಿದ್ದ ಪ್ರದರ್ಶನಗಳ ಸಂಖ್ಯೆಗಿಂತ ಎರಡನೇ ದಿನ ಕಬ್ಜ ಚಿತ್ರ ಹೆಚ್ಚು ಪ್ರದರ್ಶನಗಳನ್ನು ಬೆಂಗಳೂರು ನಗರದಲ್ಲಿ ಪಡೆದುಕೊಂಡಿದೆ. ಮೊದಲ ದಿನ ಬೆಂಗಳೂರಿನಲ್ಲಿ 597 ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಕಬ್ಜ ಚಿತ್ರ ಇಂದು ಎರಡನೇ ದಿನ 623 ಪ್ರದರ್ಶನಗಳನ್ನು ಪಡೆದುಕೊಂಡಿದೆ.
ಈ ರೀತಿ ಈ ವರ್ಷ ತೆರೆಕಂಡ ಯಾವ ಸಿನಿಮಾಗಳೂ ಸಹ ಬೆಂಗಳೂರಿನಲ್ಲಿ ಮೊದಲ ದಿನಕ್ಕಿಂತ ಎರಡನೇ ದಿನ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಂಡಿರಲಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯ ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಚಿತ್ರಗಳು ಎರಡನೇ ದಿನ ಕಡಿಮೆ ಪ್ರದರ್ಶನಗಳನ್ನು ಪಡೆದುಕೊಂಡು ಶೋಗಳನ್ನು ಕಳೆದುಕೊಂಡಿದ್ದವು. ಈ ವರ್ಷ ತೆರೆಕಂಡ ಚಿತ್ರಗಳಲ್ಲಿ ಎರಡನೇ ದಿನ 600ಕ್ಕಿಂತ ಹೆಚ್ಚಿನ ಪ್ರದರ್ಶನಗಳನ್ನು ಬೆಂಗಳೂರಿನಲ್ಲಿ ಪಡೆದುಕೊಂಡ ಏಕೈಕ ಚಿತ್ರ ಎನಿಸಿಕೊಂಡಿದೆ ಕಬ್ಜ.

ಈ ವರ್ಷ ಬಿಡುಗಡೆಯಾದ ಚಿತ್ರಗಳು ಬೆಂಗಳೂರಿನಲ್ಲಿ ಮೊದಲ ದಿನ ಪಡೆದುಕೊಂಡ ಪ್ರದರ್ಶನಗಳ ಸಂಖ್ಯೆ ಈ ಕೆಳಕಂಡಂತಿದೆ..
ಪಠಾಣ್ – 821 ಪ್ರದರ್ಶನಗಳು
ವಾರಿಸು – 757 ಪ್ರದರ್ಶನಗಳು
ಕ್ರಾಂತಿ – 680 ಪ್ರದರ್ಶನಗಳು
ಕಬ್ಜ – 597 ಪ್ರದರ್ಶನಗಳು
ತುನಿವು – 568 ಪ್ರದರ್ಶನಗಳು

ಎರಡನೇ ದಿನ ಈ ಚಿತ್ರಗಳು ಪಡೆದುಕೊಂಡ ಶೋಗಳ ಸಂಖ್ಯೆ
ಪಠಾಣ್ – 563 ಪ್ರದರ್ಶನಗಳು
ವಾರಿಸು – 321 ಪ್ರದರ್ಶನಗಳು
ಕ್ರಾಂತಿ – 583 ಪ್ರದರ್ಶನಗಳು
ಕಬ್ಜ – 623 ಪ್ರದರ್ಶನಗಳು
ತುನಿವು – 300 ಪ್ರದರ್ಶನಗಳು

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

19 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

19 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

19 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

19 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

19 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

19 hours ago