Latest

2ನೇ ದಿನ ಕಬ್ಜ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೌದು, ಬಿಡುಗಡೆ ದಿನ ಪಡೆದುಕೊಂಡಿದ್ದ ಪ್ರದರ್ಶನಗಳ ಸಂಖ್ಯೆಗಿಂತ ಎರಡನೇ ದಿನ ಕಬ್ಜ ಚಿತ್ರ ಹೆಚ್ಚು ಪ್ರದರ್ಶನಗಳನ್ನು ಬೆಂಗಳೂರು ನಗರದಲ್ಲಿ ಪಡೆದುಕೊಂಡಿದೆ. ಮೊದಲ ದಿನ ಬೆಂಗಳೂರಿನಲ್ಲಿ 597 ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಕಬ್ಜ ಚಿತ್ರ ಇಂದು ಎರಡನೇ ದಿನ 623 ಪ್ರದರ್ಶನಗಳನ್ನು ಪಡೆದುಕೊಂಡಿದೆ.
ಈ ರೀತಿ ಈ ವರ್ಷ ತೆರೆಕಂಡ ಯಾವ ಸಿನಿಮಾಗಳೂ ಸಹ ಬೆಂಗಳೂರಿನಲ್ಲಿ ಮೊದಲ ದಿನಕ್ಕಿಂತ ಎರಡನೇ ದಿನ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಂಡಿರಲಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯ ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಚಿತ್ರಗಳು ಎರಡನೇ ದಿನ ಕಡಿಮೆ ಪ್ರದರ್ಶನಗಳನ್ನು ಪಡೆದುಕೊಂಡು ಶೋಗಳನ್ನು ಕಳೆದುಕೊಂಡಿದ್ದವು. ಈ ವರ್ಷ ತೆರೆಕಂಡ ಚಿತ್ರಗಳಲ್ಲಿ ಎರಡನೇ ದಿನ 600ಕ್ಕಿಂತ ಹೆಚ್ಚಿನ ಪ್ರದರ್ಶನಗಳನ್ನು ಬೆಂಗಳೂರಿನಲ್ಲಿ ಪಡೆದುಕೊಂಡ ಏಕೈಕ ಚಿತ್ರ ಎನಿಸಿಕೊಂಡಿದೆ ಕಬ್ಜ.

ಈ ವರ್ಷ ಬಿಡುಗಡೆಯಾದ ಚಿತ್ರಗಳು ಬೆಂಗಳೂರಿನಲ್ಲಿ ಮೊದಲ ದಿನ ಪಡೆದುಕೊಂಡ ಪ್ರದರ್ಶನಗಳ ಸಂಖ್ಯೆ ಈ ಕೆಳಕಂಡಂತಿದೆ..
ಪಠಾಣ್ – 821 ಪ್ರದರ್ಶನಗಳು
ವಾರಿಸು – 757 ಪ್ರದರ್ಶನಗಳು
ಕ್ರಾಂತಿ – 680 ಪ್ರದರ್ಶನಗಳು
ಕಬ್ಜ – 597 ಪ್ರದರ್ಶನಗಳು
ತುನಿವು – 568 ಪ್ರದರ್ಶನಗಳು

ಎರಡನೇ ದಿನ ಈ ಚಿತ್ರಗಳು ಪಡೆದುಕೊಂಡ ಶೋಗಳ ಸಂಖ್ಯೆ
ಪಠಾಣ್ – 563 ಪ್ರದರ್ಶನಗಳು
ವಾರಿಸು – 321 ಪ್ರದರ್ಶನಗಳು
ಕ್ರಾಂತಿ – 583 ಪ್ರದರ್ಶನಗಳು
ಕಬ್ಜ – 623 ಪ್ರದರ್ಶನಗಳು
ತುನಿವು – 300 ಪ್ರದರ್ಶನಗಳು

ಭ್ರಷ್ಟರ ಬೇಟೆ

Recent Posts

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

26 minutes ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

47 minutes ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

5 hours ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

5 hours ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

5 hours ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

17 hours ago