ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿರುವ ಭೀಕರ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪಟ್ಟಣದ ಸಂತೆಯ ದಿನದ ಮಧ್ಯಾಹ್ನ, ಜನಸಂದಣಿ ನಡುವೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕ್ರೂರವಾಗಿ ಹತ್ಯೆ ಮಾಡಿದ್ದಾರೆ.
ಸಾಮಾನ್ಯವಾಗಿ ಜನಸಂಚಾರದಿಂದ ಕಿಕ್ಕಿರಿದ ಸಂತೆಯ ವಾತಾವರಣ, ಈ ದಾಳಿಯಿಂದ ಕೆಲ ಕ್ಷಣಗಳಲ್ಲಿ ಭೀತಿಗೊಳಪಟ್ಟಿತು. ದಾಳಿಗೆ ಗುರಿಯಾದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತನನ್ನು ಹುಸೇನ ಕಿಲ್ಲೇದಾರ (25) ಎಂದು ಗುರುತಿಸಲಾಗಿದೆ. ಅವರು ಹುಕ್ಕೇರಿಯ ಅವರಗೋಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಹತ್ಯೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ತಕ್ಷಣ ಹುಕ್ಕೇರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಸಂತೆಯ ದಿನದ ನಡುಬೀದಿಯಲ್ಲಿ ನಡೆದಿರುವ ಈ ಕೊಲೆ ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿದೆ. ವರದಿ: ಶಿವು ಕುಂಬಾರ
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…