Latest

ರಾಜ್ಯದಲ್ಲೆ ಪ್ರಥಮವಾಗಿ ಮೈಕ್ರೋ ಫೈನಾನ್ಸ್ ನ ನಾಲ್ವರು ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿರುವ ಹುಲ್ಲಹಳ್ಳಿ ಪೋಲೀಸರು

ನಂಜನಗೂಡು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. ರಾಜ್ಯದಲ್ಲೇ ಮೊಟ್ಟ ಮೊದಲನೆಯದಾಗಿ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಮಹತ್ತರ ಹೆಜ್ಜೆ ಹಾಕಿ ನಾಲ್ಕು ಮಂದಿ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿದ್ದಾರೆ
ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ. ಎಫ್ ಐ ಆರ್ ದಾಖಲು ಮಾಡಿರುವ ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್ ಲೋಕೇಶ್(25) ಹಾಗೂ ಐಡಿಎಫ್ ಸಿ ಫೈನಾನ್ಸ್ ನ ಗ್ರೂಪ್ ರಿಲೇ಼ಷನ್ ಮ್ಯಾನೇಜರ್ ಸಿದ್ದರಾಜು(28) ಬಂಧಿತ ಸಿಬ್ಬಂದಿಗಳು. ಸಾಲ ವಸೂಲಿಗೆ ಬಂದಾಗ ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಗಳನ್ನ ಬಂಧಿಸಲಾಗಿದೆ.
ಕಳೆದಎರಡು ದಿನಗಳ ಹಿಂದೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಎಂಬ ಮಹಿಳೆ ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು
ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಪೊಲೀಸರು ನಾಲ್ಕು ಫೈನಾನ್ಸ್ ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮೇಲೂ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಪ್ರಕರಣ ದಾಖಲಾದಾಗ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಆದ್ರೆ ಇಲ್ಲಿ ಕೇವಲ ಸಿಬ್ಬಂದಿಗಳನ್ನ ಮಾತ್ರ ಬಂಧಿಸಿರುವುದು ಕೆಲವು ಅನುಮಾನಗಳನ್ನ ಹುಟ್ಟಿಹಾಕಿದಂತಾಗಿದೆ.
ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಜನರ ಜೀವನ್ಮರಣದ ಜೊತೆ ಚೆಲ್ಲಾಟವಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಮೇಲೂ ಕಾನೂನು ಕ್ರಮ ಜರುಗಿಸಿ ಅವರಿಂದ ಸತ್ತವರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಿಕೊಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago