ನಂಜನಗೂಡು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. ರಾಜ್ಯದಲ್ಲೇ ಮೊಟ್ಟ ಮೊದಲನೆಯದಾಗಿ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಮಹತ್ತರ ಹೆಜ್ಜೆ ಹಾಕಿ ನಾಲ್ಕು ಮಂದಿ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿದ್ದಾರೆ
ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ. ಎಫ್ ಐ ಆರ್ ದಾಖಲು ಮಾಡಿರುವ ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್ ಲೋಕೇಶ್(25) ಹಾಗೂ ಐಡಿಎಫ್ ಸಿ ಫೈನಾನ್ಸ್ ನ ಗ್ರೂಪ್ ರಿಲೇ಼ಷನ್ ಮ್ಯಾನೇಜರ್ ಸಿದ್ದರಾಜು(28) ಬಂಧಿತ ಸಿಬ್ಬಂದಿಗಳು. ಸಾಲ ವಸೂಲಿಗೆ ಬಂದಾಗ ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಗಳನ್ನ ಬಂಧಿಸಲಾಗಿದೆ.
ಕಳೆದಎರಡು ದಿನಗಳ ಹಿಂದೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಎಂಬ ಮಹಿಳೆ ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು
ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಪೊಲೀಸರು ನಾಲ್ಕು ಫೈನಾನ್ಸ್ ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮೇಲೂ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಪ್ರಕರಣ ದಾಖಲಾದಾಗ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಆದ್ರೆ ಇಲ್ಲಿ ಕೇವಲ ಸಿಬ್ಬಂದಿಗಳನ್ನ ಮಾತ್ರ ಬಂಧಿಸಿರುವುದು ಕೆಲವು ಅನುಮಾನಗಳನ್ನ ಹುಟ್ಟಿಹಾಕಿದಂತಾಗಿದೆ.
ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಜನರ ಜೀವನ್ಮರಣದ ಜೊತೆ ಚೆಲ್ಲಾಟವಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಮೇಲೂ ಕಾನೂನು ಕ್ರಮ ಜರುಗಿಸಿ ಅವರಿಂದ ಸತ್ತವರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಿಕೊಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…