ನಂಜನಗೂಡು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. ರಾಜ್ಯದಲ್ಲೇ ಮೊಟ್ಟ ಮೊದಲನೆಯದಾಗಿ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಮಹತ್ತರ ಹೆಜ್ಜೆ ಹಾಕಿ ನಾಲ್ಕು ಮಂದಿ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿದ್ದಾರೆ
ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ. ಎಫ್ ಐ ಆರ್ ದಾಖಲು ಮಾಡಿರುವ ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್ ಲೋಕೇಶ್(25) ಹಾಗೂ ಐಡಿಎಫ್ ಸಿ ಫೈನಾನ್ಸ್ ನ ಗ್ರೂಪ್ ರಿಲೇ಼ಷನ್ ಮ್ಯಾನೇಜರ್ ಸಿದ್ದರಾಜು(28) ಬಂಧಿತ ಸಿಬ್ಬಂದಿಗಳು. ಸಾಲ ವಸೂಲಿಗೆ ಬಂದಾಗ ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಗಳನ್ನ ಬಂಧಿಸಲಾಗಿದೆ.
ಕಳೆದಎರಡು ದಿನಗಳ ಹಿಂದೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಎಂಬ ಮಹಿಳೆ ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು
ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಪೊಲೀಸರು ನಾಲ್ಕು ಫೈನಾನ್ಸ್ ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮೇಲೂ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಪ್ರಕರಣ ದಾಖಲಾದಾಗ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಆದ್ರೆ ಇಲ್ಲಿ ಕೇವಲ ಸಿಬ್ಬಂದಿಗಳನ್ನ ಮಾತ್ರ ಬಂಧಿಸಿರುವುದು ಕೆಲವು ಅನುಮಾನಗಳನ್ನ ಹುಟ್ಟಿಹಾಕಿದಂತಾಗಿದೆ.
ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಜನರ ಜೀವನ್ಮರಣದ ಜೊತೆ ಚೆಲ್ಲಾಟವಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಮೇಲೂ ಕಾನೂನು ಕ್ರಮ ಜರುಗಿಸಿ ಅವರಿಂದ ಸತ್ತವರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಿಕೊಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…