Latest

ಧರ್ಮಸ್ಥಳ ನದಿ ತಟದಲ್ಲಿ ಹೂತ ಶವಗಳ ಬೇಟೆ: ಎಸ್ಐಟಿ ಉತ್ಖನನ ಕಾರ್ಯಾಚರಣೆಗೂ ವೇಗ

ಬೆಳ್ತಂಗಡಿ, ಜುಲೈ 31 – ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಿಗೂಢವಾಗಿ ಹೂತ ಶವಗಳ ಮಾಹಿತಿ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಇಂದು ಮೂರನೇ ದಿನವೂ ಉತ್ಖನನ ಕಾರ್ಯಾಚರಣೆ ಮುಂದುವರಿಸಿದೆ.

ಈಗಾಗಲೇ ಶಂಕಿತ 13 ಸ್ಥಳಗಳನ್ನು ಗುರುತಿಸಲಾಗಿದೆ. ಸೋಮವಾರದಿಂದ ಪ್ರಾರಂಭವಾದ ಕಾರ್ಯಾಚರಣೆಯಲ್ಲಿಂದು 5 ಸ್ಥಳಗಳಲ್ಲಿ ಗುಂಡಿ ಅಗೆಲಾಗಿದ್ದು, ಯಾವುದೇ ಅಸ್ಥಿಪಂಜರ ಅಥವಾ ಶವಾಧಾರಗಳು ಲಭಿಸಿಲ್ಲ. ಇಂದಿನ ಕಾರ್ಯಚರಣೆ ಉತ್ಕಂಠೆ ಮೂಡಿಸಿದ್ದು, ಬಾಕಿಯಿರುವ 8 ಜಾಗಗಳಲ್ಲಿ 20 ಕಾರ್ಮಿಕರ ತಂಡ ಮಾನವ ಶ್ರಮದ ಮೂಲಕ ನೆಲ ಅಗೆಲಿದೆ. ಈ ಕಾರ್ಯದಲ್ಲಿ ಸ್ಥಳೀಯರ ಸಹಕಾರ ಕೂಡ ಪಡೆದಿದ್ದು, ಸ್ಥಳದಲ್ಲೇ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ನೇತೃತ್ವ ವಹಿಸಿದ್ದಾರೆ.

ನೇತ್ರಾವತಿ ನದಿಯ 6ನೇ ಪಾಯಿಂಟ್ ಬಳಿ ಕಾರ್ಯಾಚರಣೆ ಆರಂಭವಾಗಿದ್ದು, ಅನಾಮಿಕ ದೂರುದಾರನ ಒದಗಿಸಿದ ಮಾಹಿತಿಯಂತೆ ಇಲ್ಲಿ ಅತಿಮುಖ್ಯ ಸ್ಪಾಟ್‌ಗಳು ಇವೆ ಎನ್ನಲಾಗಿದೆ. ಹೀಗಾಗಿ ಇಂದಿನ ನೆಲ ಅಗೆಯುವ ಪ್ರಕ್ರಿಯೆ ಹೆಚ್ಚು ಪ್ರಾಮುಖ್ಯತೆ ಹೊಂದಿದೆ.

ಈ ಮಧ್ಯೆ ಬುಧವಾರ ರಾತ್ರಿ ಅನಾಮಿಕ ವ್ಯಕ್ತಿಯೊಬ್ಬನಿಗೆ ಎಸ್ಐಟಿ ತೀವ್ರ ವಿಚಾರಣೆ ನಡೆಸಿದ್ದು, ಆತ ನೀಡಿದ ಪೂರಕ ಮಾಹಿತಿಗಳು ತನಿಖೆಗೆ ಹೊಸ ದಿಕ್ಕು ನೀಡಿವೆ. ಪ್ರಮುಖವಾಗಿ, ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಹೆಸರನ್ನು ಆತ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ. ಈ ಅಧಿಕಾರಿ ಧರ್ಮಸ್ಥಳದ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ವ್ಯಕ್ತಿಯಾಗಿದ್ದು, ಎಸ್ಐಟಿ ಅವರನ್ನೂ ಶೀಘ್ರವೇ ವಿಚಾರಣೆಗೆ ಒಳಪಡಿಸಬಹುದೆಂಬ ಅರ್ಥವೊಂದು ಮೂಡಿದೆ.

ಅಲ್ಲದೇ, ಅನಾಮಿಕ ವ್ಯಕ್ತಿ ನೀಡಿದ ಮಾಹಿತಿ ಆಧಾರವಾಗಿ ಹಲವು ಹೊಸ ಹೆಸರುಗಳು ತನಿಖಾ ವ್ಯಾಪ್ತಿಗೆ ಬಂದಿವೆ. ಹೀಗಾಗಿ, ಅವರಿಗೂ ನೋಟಿಸ್ ಜಾರಿ ಮಾಡಿ ಪ್ರಶ್ನಿಸಬಹುದಾದ ನಿರೀಕ್ಷೆಯಿದೆ.

ಈಗಾಗಲೇ ನಡೆದಿರುವ ಕಾರ್ಯಾಚರಣೆಗಳಿಂದ ಶವ ಅಥವಾ ಅಸ್ಥಿಪಂಜರ ಪತ್ತೆಯಾಗದಿದ್ದರೂ, SIT ನ ಇಂದು ನಡೆಯುವ ದಳದ ಉತ್ಖನನ ಕಾರ್ಯವು ನಿರ್ಣಾಯಕ ಹಂತದಲ್ಲಿ ನಿಂತಿದೆ. ಹೀಗಾಗಿ ಇಂದಿನ ದಿನದ ಬೆಳವಣಿಗೆಗೆ ಶ್ರದ್ಧಾ ಕೇಂದ್ರದ ಸುತ್ತಮುತ್ತ ವ್ಯಾಪಕ ತಲೆಕೆಡಿಸಿಕೊಳ್ಳುತ್ತಿರುವ ಸಾರ್ವಜನಿಕರಲ್ಲಿ ಇನ್ನಷ್ಟು ಕುತೂಹಲ ಮೂಡಿದೆ.

ಜಿಲ್ಲಾ ಹಾಗೂ ರಾಜ್ಯದ ತನಿಖಾ ತಂತ್ರಗಳನ್ನು ಹೊತ್ತಿ ಹಾಕಿಕೊಳ್ಳುವ ಈ ಪ್ರಕ್ರಿಯೆಯಲ್ಲಿ ಯಾವುದೇ ಪತ್ತೆಯಾದರೂ ಭವಿಷ್ಯದಲ್ಲಿನ ಮಹತ್ವದ ಬೆಳವಣಿಗೆಗೆ ನಾಂದಿಯಾಗಲಿದೆ.

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago