Latest

ಧರ್ಮಸ್ಥಳ ನದಿ ತಟದಲ್ಲಿ ಹೂತ ಶವಗಳ ಬೇಟೆ: ಎಸ್ಐಟಿ ಉತ್ಖನನ ಕಾರ್ಯಾಚರಣೆಗೂ ವೇಗ

ಬೆಳ್ತಂಗಡಿ, ಜುಲೈ 31 – ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಿಗೂಢವಾಗಿ ಹೂತ ಶವಗಳ ಮಾಹಿತಿ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಇಂದು ಮೂರನೇ ದಿನವೂ ಉತ್ಖನನ ಕಾರ್ಯಾಚರಣೆ ಮುಂದುವರಿಸಿದೆ.

ಈಗಾಗಲೇ ಶಂಕಿತ 13 ಸ್ಥಳಗಳನ್ನು ಗುರುತಿಸಲಾಗಿದೆ. ಸೋಮವಾರದಿಂದ ಪ್ರಾರಂಭವಾದ ಕಾರ್ಯಾಚರಣೆಯಲ್ಲಿಂದು 5 ಸ್ಥಳಗಳಲ್ಲಿ ಗುಂಡಿ ಅಗೆಲಾಗಿದ್ದು, ಯಾವುದೇ ಅಸ್ಥಿಪಂಜರ ಅಥವಾ ಶವಾಧಾರಗಳು ಲಭಿಸಿಲ್ಲ. ಇಂದಿನ ಕಾರ್ಯಚರಣೆ ಉತ್ಕಂಠೆ ಮೂಡಿಸಿದ್ದು, ಬಾಕಿಯಿರುವ 8 ಜಾಗಗಳಲ್ಲಿ 20 ಕಾರ್ಮಿಕರ ತಂಡ ಮಾನವ ಶ್ರಮದ ಮೂಲಕ ನೆಲ ಅಗೆಲಿದೆ. ಈ ಕಾರ್ಯದಲ್ಲಿ ಸ್ಥಳೀಯರ ಸಹಕಾರ ಕೂಡ ಪಡೆದಿದ್ದು, ಸ್ಥಳದಲ್ಲೇ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ನೇತೃತ್ವ ವಹಿಸಿದ್ದಾರೆ.

ನೇತ್ರಾವತಿ ನದಿಯ 6ನೇ ಪಾಯಿಂಟ್ ಬಳಿ ಕಾರ್ಯಾಚರಣೆ ಆರಂಭವಾಗಿದ್ದು, ಅನಾಮಿಕ ದೂರುದಾರನ ಒದಗಿಸಿದ ಮಾಹಿತಿಯಂತೆ ಇಲ್ಲಿ ಅತಿಮುಖ್ಯ ಸ್ಪಾಟ್‌ಗಳು ಇವೆ ಎನ್ನಲಾಗಿದೆ. ಹೀಗಾಗಿ ಇಂದಿನ ನೆಲ ಅಗೆಯುವ ಪ್ರಕ್ರಿಯೆ ಹೆಚ್ಚು ಪ್ರಾಮುಖ್ಯತೆ ಹೊಂದಿದೆ.

ಈ ಮಧ್ಯೆ ಬುಧವಾರ ರಾತ್ರಿ ಅನಾಮಿಕ ವ್ಯಕ್ತಿಯೊಬ್ಬನಿಗೆ ಎಸ್ಐಟಿ ತೀವ್ರ ವಿಚಾರಣೆ ನಡೆಸಿದ್ದು, ಆತ ನೀಡಿದ ಪೂರಕ ಮಾಹಿತಿಗಳು ತನಿಖೆಗೆ ಹೊಸ ದಿಕ್ಕು ನೀಡಿವೆ. ಪ್ರಮುಖವಾಗಿ, ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಹೆಸರನ್ನು ಆತ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ. ಈ ಅಧಿಕಾರಿ ಧರ್ಮಸ್ಥಳದ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ವ್ಯಕ್ತಿಯಾಗಿದ್ದು, ಎಸ್ಐಟಿ ಅವರನ್ನೂ ಶೀಘ್ರವೇ ವಿಚಾರಣೆಗೆ ಒಳಪಡಿಸಬಹುದೆಂಬ ಅರ್ಥವೊಂದು ಮೂಡಿದೆ.

ಅಲ್ಲದೇ, ಅನಾಮಿಕ ವ್ಯಕ್ತಿ ನೀಡಿದ ಮಾಹಿತಿ ಆಧಾರವಾಗಿ ಹಲವು ಹೊಸ ಹೆಸರುಗಳು ತನಿಖಾ ವ್ಯಾಪ್ತಿಗೆ ಬಂದಿವೆ. ಹೀಗಾಗಿ, ಅವರಿಗೂ ನೋಟಿಸ್ ಜಾರಿ ಮಾಡಿ ಪ್ರಶ್ನಿಸಬಹುದಾದ ನಿರೀಕ್ಷೆಯಿದೆ.

ಈಗಾಗಲೇ ನಡೆದಿರುವ ಕಾರ್ಯಾಚರಣೆಗಳಿಂದ ಶವ ಅಥವಾ ಅಸ್ಥಿಪಂಜರ ಪತ್ತೆಯಾಗದಿದ್ದರೂ, SIT ನ ಇಂದು ನಡೆಯುವ ದಳದ ಉತ್ಖನನ ಕಾರ್ಯವು ನಿರ್ಣಾಯಕ ಹಂತದಲ್ಲಿ ನಿಂತಿದೆ. ಹೀಗಾಗಿ ಇಂದಿನ ದಿನದ ಬೆಳವಣಿಗೆಗೆ ಶ್ರದ್ಧಾ ಕೇಂದ್ರದ ಸುತ್ತಮುತ್ತ ವ್ಯಾಪಕ ತಲೆಕೆಡಿಸಿಕೊಳ್ಳುತ್ತಿರುವ ಸಾರ್ವಜನಿಕರಲ್ಲಿ ಇನ್ನಷ್ಟು ಕುತೂಹಲ ಮೂಡಿದೆ.

ಜಿಲ್ಲಾ ಹಾಗೂ ರಾಜ್ಯದ ತನಿಖಾ ತಂತ್ರಗಳನ್ನು ಹೊತ್ತಿ ಹಾಕಿಕೊಳ್ಳುವ ಈ ಪ್ರಕ್ರಿಯೆಯಲ್ಲಿ ಯಾವುದೇ ಪತ್ತೆಯಾದರೂ ಭವಿಷ್ಯದಲ್ಲಿನ ಮಹತ್ವದ ಬೆಳವಣಿಗೆಗೆ ನಾಂದಿಯಾಗಲಿದೆ.

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

15 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago