ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು ವಾಮಾಚಾರ ಮಾಡುವ ಬೆದರಿಕೆ ನೀಡಿ, ಮಹಿಳೆಯ ಗಂಡ ಮತ್ತು ಮಗನ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಹೆದರಿಸಿ ಈ ಕೃತ್ಯಗಳನ್ನು ನಡೆಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ತರಬೇತಿ ಕೇಂದ್ರ ನಡೆಸುತ್ತಿರುವ ಮಹಿಳೆಗೆ, ತನ್ನ ಸಹೋದರಿಯ ಪ್ರವೇಶ ವಿಚಾರದಲ್ಲಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದನು. ನಂತರ ಮಹಿಳೆಯ ಆರ್ಥಿಕ ಸ್ಥಿತಿ ಸುಧಾರಣೆಗೆ ಪೂಜೆ ಮಾಡಬೇಕೆಂದು ನಂಬಿಸಿ, ಅವಳನ್ನು ತನ್ನ ಪ್ರಭಾವಕ್ಕೆ ಒಳಪಡಿಸಿದ್ದಾನೆ.
2025ರ ಜನವರಿ 30ರಂದು ರಾಮನಗರ ಜಿಲ್ಲೆಯ ಪಿರಮಿಡ್ ವ್ಯಾಲಿಗೆ ಕರೆದುಕೊಂಡು ಹೋಗಿ, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಾದ ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗಾಗಿ ಕರೆದುಕೊಂಡು ಹೋಗಿ, ಮರಳುವ ವೇಳೆ ಕಾರಿನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗೂ ಹೇಳದಂತೆ, ಕುಟುಂಬದ ಮೇಲೆ ಮಾಟ-ಮಂತ್ರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದ ಆರೋಪಿಯು, ಗಂಡ ಮತ್ತು ಮಗನನ್ನು ಹೊರಗೆ ಕಳುಹಿಸಿ, ಮತ್ತೆ ದೌರ್ಜನ್ಯ ಎಸಗಿದ್ದಾನೆ. ತನ್ನ ಮಾತು ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಜೀವಭೀತಿಯನ್ನೂ ಹುಟ್ಟಿಸಿದ್ದಾನೆ.
ಆರೋಪಿಯ ಕಾಟ ತಾಳಲಾರದೆ, ಮಹಿಳೆ ಕೊನೆಗೂ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಆರೋಪಿ ಪರಾರಿಯಾಗಿದ್ದು, ಪೊಲೀಸರು ಅವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…