ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ ಹಾಗೂ ಆಕೆಯ ಪ್ರಿಯಕರ ಎನ್ನಲಾದ ನಗರಸಭೆ ಸದಸ್ಯ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕುಂಬಾರ ಬೀದಿಯಲ್ಲಿ ನಡೆದಿದೆ.
ಘಟನೆಯ ವಿವರ:
ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಚಂದ್ರಶೇಖರ್ ಅವರ ಪತ್ನಿ ಪವಿತ್ರಾ ಮತ್ತು ನಗರಸಭೆ ಸದಸ್ಯ ಲಕ್ಷ್ಮಣ್ ನಡುವೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿದ ಚಂದ್ರಶೇಖರ್, ಇಬ್ಬರನ್ನೂ ರೆಡ್ಹ್ಯಾಂಡ್ ಆಗಿ ಹಿಡಿದು ಪ್ರಶ್ನಿಸಿದ್ದಾರೆ.
ನಡುರಸ್ತೆಯಲ್ಲೇ ಹಲ್ಲೆ:
ಪತಿಯ ಪ್ರಶ್ನೆಗೆ ಕೋಪಗೊಂಡ ಪವಿತ್ರಾ, ತನ್ನ ಪ್ರಿಯಕರ ಲಕ್ಷ್ಮಣ್ ಜೊತೆ ಸೇರಿ ಚಂದ್ರಶೇಖರ್ ಮೇಲೆ ದಾಳಿ ನಡೆಸಿದ್ದಾರೆ. ದೊಣ್ಣೆಗಳನ್ನು ಬಳಸಿಕೊಂಡು ಸಾರ್ವಜನಿಕರ ಎದುರಲ್ಲೇ ಮನಬಂದಂತೆ ಹಲ್ಲೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ – ಪ್ರಕರಣ ದಾಖಲು:
ಗಂಭೀರವಾಗಿ ಗಾಯಗೊಂಡಿರುವ ಚಂದ್ರಶೇಖರ್ ಅವರನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ನಿ ಪವಿತ್ರಾ ಹಾಗೂ ನಗರಸಭೆ ಸದಸ್ಯ ಲಕ್ಷ್ಮಣ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜನಪ್ರತಿನಿಧಿಯೊಬ್ಬರು ಇಂತಹ ಪ್ರಕರಣದಲ್ಲಿ ತೊಡಗಿಸಿಕೊಂಡಿರುವುದು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…