Latest

ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿ ಮೇಲೆ ಪ್ರಿಯಕರನಿಂದ ಹಲ್ಲೆ!

ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ ಮೇಲೆ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪತಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಲಕ್ಮೀಪುರ ನಿವಾಸಿ ನಂದೀಶ್ ಎಂಬವರು ಪಕ್ಕದ ಹೊಸಪೇಟೆ ಗ್ರಾಮದ ಹೋಂಗಾರ್ಡ್ ಆಗಿರುವ ಸುಜಿತ್ ಎಂಬ ಯುವಕನಿಂದ ಹಲ್ಲೆಗೀಡಾದವರು. ವಿಚಾರದ ಮೂಲವೆಂದರೆ ನಂದೀಶ್ ಪತ್ನಿ ಶ್ರುತಿ ಹಾಗೂ ಸುಜಿತ್ ನಡುವೆ ಕಳೆದ ಆರು ತಿಂಗಳಿಂದ ಅಕ್ರಮ ಸಂಬಂಧವಿದ್ದಂತೆ ತಿಳಿದುಬಂದಿದೆ.

ಸೋಮವಾರದಂದು ನಂದೀಶ್ ತನ್ನ ದೈನಂದಿನ ಕೆಲಸಕ್ಕೆ ತೆರಳಿದ್ದರೂ, ಅನಿರೀಕ್ಷಿತವಾಗಿ ಅರ್ಧ ಗಂಟೆ ಬಳಿಕ ಮನೆಗೆ ಹಿಂದಿರುಗಿದಾಗ ಪತ್ನಿ ಶ್ರುತಿ ಮತ್ತು ಸುಜಿತ್ ಇಬ್ಬರೂ ಮನೆಯೊಳಗೆ ಇದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಅನುಮಾನ ಸತ್ಯವಾಯಿತು. ಈ ವೇಳೆ ಗದರಿಕೆಗೆ ಒಳಗಾದ ಸುಜಿತ್, ಸಂಬಂಧ ಬಯಲಾಗುತ್ತದೆ ಎಂಬ ಆತಂಕದಲ್ಲಿ ನಂದೀಶ್ ಮೇಲೆ ಹಲ್ಲೆ ನಡೆಸಿದ್ದಾನೆ.

ಘಟನೆಯಲ್ಲಿ ತೀವ್ರ ಗಾಯಗೊಂಡ ನಂದೀಶ್ ಅವರನ್ನು ತಕ್ಷಣ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬೆನ್ನಲ್ಲೇ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಂದೀಶ್ ಸಂಬಂಧಿಕರು ಸುಜಿತ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪೋಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ್ದಾರೆ.

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago