ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ ಮೇಲೆ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪತಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಲಕ್ಮೀಪುರ ನಿವಾಸಿ ನಂದೀಶ್ ಎಂಬವರು ಪಕ್ಕದ ಹೊಸಪೇಟೆ ಗ್ರಾಮದ ಹೋಂಗಾರ್ಡ್ ಆಗಿರುವ ಸುಜಿತ್ ಎಂಬ ಯುವಕನಿಂದ ಹಲ್ಲೆಗೀಡಾದವರು. ವಿಚಾರದ ಮೂಲವೆಂದರೆ ನಂದೀಶ್ ಪತ್ನಿ ಶ್ರುತಿ ಹಾಗೂ ಸುಜಿತ್ ನಡುವೆ ಕಳೆದ ಆರು ತಿಂಗಳಿಂದ ಅಕ್ರಮ ಸಂಬಂಧವಿದ್ದಂತೆ ತಿಳಿದುಬಂದಿದೆ.
ಸೋಮವಾರದಂದು ನಂದೀಶ್ ತನ್ನ ದೈನಂದಿನ ಕೆಲಸಕ್ಕೆ ತೆರಳಿದ್ದರೂ, ಅನಿರೀಕ್ಷಿತವಾಗಿ ಅರ್ಧ ಗಂಟೆ ಬಳಿಕ ಮನೆಗೆ ಹಿಂದಿರುಗಿದಾಗ ಪತ್ನಿ ಶ್ರುತಿ ಮತ್ತು ಸುಜಿತ್ ಇಬ್ಬರೂ ಮನೆಯೊಳಗೆ ಇದ್ದ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಅನುಮಾನ ಸತ್ಯವಾಯಿತು. ಈ ವೇಳೆ ಗದರಿಕೆಗೆ ಒಳಗಾದ ಸುಜಿತ್, ಸಂಬಂಧ ಬಯಲಾಗುತ್ತದೆ ಎಂಬ ಆತಂಕದಲ್ಲಿ ನಂದೀಶ್ ಮೇಲೆ ಹಲ್ಲೆ ನಡೆಸಿದ್ದಾನೆ.
ಘಟನೆಯಲ್ಲಿ ತೀವ್ರ ಗಾಯಗೊಂಡ ನಂದೀಶ್ ಅವರನ್ನು ತಕ್ಷಣ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬೆನ್ನಲ್ಲೇ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಂದೀಶ್ ಸಂಬಂಧಿಕರು ಸುಜಿತ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪೋಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ್ದಾರೆ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…