ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.
ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ.
ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…