ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.
ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ.
ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…