Latest

ಮೂರು ಮಕ್ಕಳನ್ನು ಕೈಗೆ ಕೊಟ್ಟು ಪ್ರೇಯಸಿಯೊಂದಿಗೆ ಪತಿರಾಯ ಎಸ್ಕೇಪ್..!

ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.

ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್‌ ಠಾಣೆಗೆ ಶರಣಾಗಿದ್ದಾಳೆ.

ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

11 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

11 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago