ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.
ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ.
ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…