Categories: CrimeLatest

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್ ಕುಮಾರ್ (24) ವಿಚಾರಣೆಯ ವೇಳೆ ನೀಡಿರುವ ಹೇಳಿಕೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಿಹಾರ ಮೂಲದ ಧೀರಜ್ ಕುಮಾರ್ ಮತ್ತು ರೀಮಾ ಪರಸ್ಪರ ಪ್ರೀತಿಸಿ ಸುಮಾರು ಹತ್ತು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದವು ಎನ್ನಲಾಗಿದೆ.

ವಿಚಾರಣೆಯಲ್ಲಿ ಆರೋಪಿ, ಪತ್ನಿ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿ ರೀಲ್ಸ್ ಮಾಡುವುದರಲ್ಲಿ ಕಳೆಯುತ್ತಿದ್ದರು. ಮನೆ ಕೆಲಸ ಹಾಗೂ ದಾಂಪತ್ಯ ಜೀವನದ ಕಡೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಅಲ್ಲದೆ ಆಗಾಗ ಬಿಹಾರಕ್ಕೆ ಹಿಂದಿರುಗುವುದಾಗಿ ಹೇಳುತ್ತಿದ್ದರು ಎಂದು ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದೇ ವಿಚಾರವಾಗಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಜುಲೈ 25ರಂದು ಕೆಲಸ ಮುಗಿಸಿ ಮನೆಗೆ ಬಂದಾಗ ಊಟ ಸಿದ್ಧವಾಗಿರಲಿಲ್ಲ. ಇದರಿಂದ ಮಾತಿನ ಚಕಮಕಿ ಆರಂಭವಾಗಿ ವಾಗ್ವಾದ ತೀವ್ರಗೊಂಡಿತು. ಈ ವೇಳೆ ಪತ್ನಿ ತನ್ನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದರು ಎಂದು ಆರೋಪಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಕೋಪದ ಭರದಲ್ಲಿ ಆರೋಪಿ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿ, ಬಳಿಕ ಮೃತದೇಹದ ಮುಖಕ್ಕೆ ಪ್ಲಾಸ್ಟಿಕ್ ಸುತ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವಿಚಾರಣೆಯಲ್ಲಿ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಬಿಹಾರಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ತಾಂತ್ರಿಕ ಮಾಹಿತಿ ಆಧರಿಸಿ ಪತ್ತೆಹಚ್ಚಿದ ಕುಂಬಳಗೋಡು ಪೊಲೀಸರು, ಬಿಹಾರದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 hour ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 hour ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 hour ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 hour ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 hour ago

ಅಕ್ರಮ ಸಂಬಂಧಕ್ಕೆ ಪತಿಯೇ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ, 6 ತಿಂಗಳ ಬಳಿಕ ಬಯಲಾಯ್ತು ರಹಸ್ಯ!

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು…

1 hour ago