Categories: CrimeLatest

ಅಕ್ರಮ ಸಂಬಂಧ ಬಯಲಾದ ಬಳಿಕ ಗಂಡನ ಕೊಲೆ: ಅಪಘಾತದ ನಾಟಕವಾಡಿ ಕಾಲುವೆಗೆ ಶವ ಎಸೆದ ಪತ್ನಿ ಮತ್ತು ಪ್ರೇಮಿ!

ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು 23 ದಿನಗಳ ಬಳಿಕ ಬಯಲಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಅಥವಾ ಅಪಘಾತವೆಂದು ಭಾವಿಸಲಾಗಿದ್ದ ಯುವಕನ ಸಾವು, ಪತ್ನಿ ಮತ್ತು ಆಕೆಯ ಪ್ರೇಮಿಯ ಸಂಚು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು 21 ವರ್ಷದ ಮೋನು ಕುಮಾರ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೋನು ಜೂನ್ 8ರಂದು ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ಕಸೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಜೂನ್ 10ರಂದು ಅಸಲ್ವಾಸ್ ಗ್ರಾಮದ ಸಮೀಪದ ಕಾಲುವೆಯಲ್ಲಿ ಆತನ ಶವ ಪತ್ತೆಯಾಗಿತ್ತು.

ಘಟನಾ ಸ್ಥಳದಲ್ಲಿ ಮೋನು ಬಳಸುತ್ತಿದ್ದ ಸ್ಕೂಟರ್ ಕಾಲುವೆ ಪಕ್ಕದಲ್ಲೇ ಸರಿಯಾಗಿ ನಿಲ್ಲಿಸಲಾಗಿತ್ತು. ಮೃತದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳ ಗುರುತು ಕಾಣಿಸದ ಕಾರಣ, ಇದು ಆತ್ಮಹತ್ಯೆ ಅಥವಾ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ಸಂಭವಿಸಿದ ಸಾವು ಎಂದು ಪೊಲೀಸರು ಆರಂಭದಲ್ಲಿ ಶಂಕಿಸಿದ್ದರು. ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

ಆದರೆ ತನಿಖೆ ಮುಂದುವರಿದಂತೆ ಮೋನು ಪತ್ನಿ ತನ್ನು ವರ್ತನೆ ಮತ್ತು ಹೇಳಿಕೆಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿತು. ವಿಚಾರಣೆಯನ್ನು ತೀವ್ರಗೊಳಿಸಿದಾಗ, ತನ್ನು ತನ್ನ ಪ್ರೇಮಿ ಸೋನು ಸಿಂಗ್ ಜೊತೆಗೂಡಿ ಗಂಡನ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೋನು ಮತ್ತು ತನ್ನು ವಿವಾಹವಾಗಿ ಮೂರು ವರ್ಷಗಳಾಗಿದ್ದರೂ, ದಾಂಪತ್ಯ ಜೀವನದಲ್ಲಿ ಅಸಮಾಧಾನ ಇತ್ತು. ಈ ನಡುವೆ ತನ್ನುಗೆ ಮುಂಡನವಾಸ್ ಗ್ರಾಮದ ಸೋನು ಸಿಂಗ್ ಜೊತೆ ಅಕ್ರಮ ಸಂಬಂಧ ಬೆಳೆದಿತ್ತು. ಇತ್ತೀಚೆಗೆ ಈ ವಿಷಯ ಮೋನುಗೆ ತಿಳಿದಿದ್ದರಿಂದ ದಂಪತಿಗಳ ನಡುವೆ ಜಗಳ ಹೆಚ್ಚಾಗಿತ್ತು.

ತಮ್ಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಮೋನುವನ್ನು ಹತ್ಯೆ ಮಾಡಲು ತನ್ನು ಮತ್ತು ಸೋನು ಸಂಚು ರೂಪಿಸಿದ್ದರು. ಯೋಜನೆಯಂತೆ ತನ್ನು, ಮೋನುವನ್ನು ಕಸೋಲಾ ಭಾಗದ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಅಲ್ಲಿ ಮೊದಲೇ ಕಾಯುತ್ತಿದ್ದ ಸೋನು ಮತ್ತು ಆತನ ಸಹಚರರು ಮೋನು ಮೇಲೆ ದಾಳಿ ನಡೆಸಿದ್ದಾರೆ.

ಮೋನುಗೆ ಗಾಯಗಳಾಗದಂತೆ ಮೂಗು ಮತ್ತು ಬಾಯಿಯನ್ನು ಒತ್ತಿಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಬಳಿಕ ಪ್ರಕರಣವನ್ನು ಅಪಘಾತವೆಂದು ತೋರಿಸಲು ಶವವನ್ನು ಕಾಲುವೆಗೆ ಎಸೆದು, ಸ್ಕೂಟರ್ ಅನ್ನು ಪಕ್ಕದಲ್ಲೇ ನಿಲ್ಲಿಸಿ ಆರೋಪಿಗಳು ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಪೊಲೀಸರು ತನ್ನು ಮತ್ತು ಸೋನುನ ಸಹಚರ ಹರಿಯೋಮ್ ಅವರನ್ನು ಬಂಧಿಸಿದ್ದು, ನ್ಯಾಯಾಲಯ ಇಬ್ಬರನ್ನೂ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಮುಖ ಆರೋಪಿ ಸೋನು ಸಿಂಗ್ ಸೇರಿದಂತೆ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಘಟನೆ ಸ್ಥಳೀಯರಲ್ಲಿ ಭಾರೀ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

12 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

12 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

12 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

12 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

12 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

12 hours ago