ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮಂಗಳವಾರ ತೀವ್ರ ಸದ್ದು ಮೂಡಿಸಿರುವ ಗೃಹ ಕಲಹ ಹತ್ಯೆ ಪ್ರಕರಣ ನಡೆದಿದೆ. ಪತ್ನಿ ತನ್ನ ಸಹೋದರನ ಸಹಾಯದಿಂದ ಗಂಡನನ್ನು ಹತ್ಯೆಗೈದು, ಶವವನ್ನು ನೇರವಾಗಿ ಮನೆಯ ಮುಂದೆ ಬಿಟ್ಟಿರುವ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಮೃತ ವ್ಯಕ್ತಿ ನಂದ್ಯಾಲದ ನೂನೆಪಲ್ಲೆ ಗ್ರಾಮದ ನಿವಾಸಿ ರಾಮಣಯ್ಯ (ವಯಸ್ಸು 50). ಈತನ ಪತ್ನಿ ರಮಣಮ್ಮ ಮತ್ತು ಆಕೆಯ ಸಹೋದರ ರಾಮಯ್ಯ ಈ ದಾರುಣ ಕೃತ್ಯದಲ್ಲಿ ಪ್ರಮುಖ ಆರೋಪಿಗಳು. ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸಿದ ನಂತರ, ಕೊಲೆ ಮಾಡಿರುವುದನ್ನು ಆರೋಪಿಗಳು ಒಪ್ಪಿ ಕೊಂಡಿದ್ದಾರೆ.
ಹತ್ಯೆಗೆ ಹಿನ್ನಲೆ
ರಾಮಣಯ್ಯ ಹಾಗೂ ಪಿಡುಗುರಲ್ಲ ಗ್ರಾಮದ ರಮಣಮ್ಮ 20 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಜ್ಯೋತಿ, ಚಂದನ ಹಾಗೂ ಸಾಯಿ ಎಂಬ ಮಕ್ಕಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದಂಪತಿಗಳ ನಡುವೆ ಮನಸ್ತಾಪದಿಂದಾಗಿ, ರಮಣಮ್ಮ ತವರು ಮನೆ ಪಿಡುಗುರಲ್ಲಲ್ಲಿ ವಾಸವಾಗಿದ್ದಳು.
ಈ ನಡುವೆ ಮಂಗಳವಾರ ತನ್ನ ಪತ್ನಿಯನ್ನ ಕರೆತರುವ ಉದ್ದೇಶದಿಂದ ರಾಮಣಯ್ಯ ಪಿಡುಗುರಲ್ಲಕ್ಕೆ ತೆರಳಿದ್ದನು. ಅಲ್ಲಿಗೆ ತಲುಪಿದ ನಂತರ ರಮಣಮ್ಮ ಕುಟುಂಬದೊಂದಿಗೆ ಗಲಾಟೆ ಉಂಟಾಗಿದೆ. ಜಗಳ ತೀವ್ರಗೊಂಡಾಗ ರಮಣಮ್ಮ ಹಾಗೂ ಆಕೆಯ ತಮ್ಮ ರಾಮಯ್ಯ – ಅವರು ರಾಮಣಯ್ಯನ ಕಣ್ಣಿಗೆ ಕಾರದ ಪುಡಿ ಎರಚಿ, ಗಲಾಟೆಯ ನಡುವೆಯೇ ಆತನ ಕತ್ತು ಹಿಸುಕಿದರೆಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆ ನಡೆದ ಬಳಿಕ, ಮೃತದೇಹವನ್ನು ನಂದ್ಯಾಲದ ನೂನೆಪಲ್ಲೆಯಲ್ಲಿರುವ ರಾಮಣಯ್ಯನ ಮನೆಯ ಮುಂದೆ ಬಿಟ್ಟು ಪರಾರಿಯಾಗಿದ್ದಾರೆ. ಪತ್ನಿಯನ್ನು ಮನೆ ಮುಂದೆ ನೋಡಿದ ಮಕ್ಕಳಿಗೆ ಶಂಕೆ ಮೂಡಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ಇಬ್ಬರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ, ಕೊಲೆ ಮಾಡುವುದಾಗಿ ಮೊದಲು ನಿಗದಿಪಡಿಸಲಾಗಿತ್ತೆಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…