ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮಂಗಳವಾರ ತೀವ್ರ ಸದ್ದು ಮೂಡಿಸಿರುವ ಗೃಹ ಕಲಹ ಹತ್ಯೆ ಪ್ರಕರಣ ನಡೆದಿದೆ. ಪತ್ನಿ ತನ್ನ ಸಹೋದರನ ಸಹಾಯದಿಂದ ಗಂಡನನ್ನು ಹತ್ಯೆಗೈದು, ಶವವನ್ನು ನೇರವಾಗಿ ಮನೆಯ ಮುಂದೆ ಬಿಟ್ಟಿರುವ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಮೃತ ವ್ಯಕ್ತಿ ನಂದ್ಯಾಲದ ನೂನೆಪಲ್ಲೆ ಗ್ರಾಮದ ನಿವಾಸಿ ರಾಮಣಯ್ಯ (ವಯಸ್ಸು 50). ಈತನ ಪತ್ನಿ ರಮಣಮ್ಮ ಮತ್ತು ಆಕೆಯ ಸಹೋದರ ರಾಮಯ್ಯ ಈ ದಾರುಣ ಕೃತ್ಯದಲ್ಲಿ ಪ್ರಮುಖ ಆರೋಪಿಗಳು. ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸಿದ ನಂತರ, ಕೊಲೆ ಮಾಡಿರುವುದನ್ನು ಆರೋಪಿಗಳು ಒಪ್ಪಿ ಕೊಂಡಿದ್ದಾರೆ.
ಹತ್ಯೆಗೆ ಹಿನ್ನಲೆ
ರಾಮಣಯ್ಯ ಹಾಗೂ ಪಿಡುಗುರಲ್ಲ ಗ್ರಾಮದ ರಮಣಮ್ಮ 20 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಜ್ಯೋತಿ, ಚಂದನ ಹಾಗೂ ಸಾಯಿ ಎಂಬ ಮಕ್ಕಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದಂಪತಿಗಳ ನಡುವೆ ಮನಸ್ತಾಪದಿಂದಾಗಿ, ರಮಣಮ್ಮ ತವರು ಮನೆ ಪಿಡುಗುರಲ್ಲಲ್ಲಿ ವಾಸವಾಗಿದ್ದಳು.
ಈ ನಡುವೆ ಮಂಗಳವಾರ ತನ್ನ ಪತ್ನಿಯನ್ನ ಕರೆತರುವ ಉದ್ದೇಶದಿಂದ ರಾಮಣಯ್ಯ ಪಿಡುಗುರಲ್ಲಕ್ಕೆ ತೆರಳಿದ್ದನು. ಅಲ್ಲಿಗೆ ತಲುಪಿದ ನಂತರ ರಮಣಮ್ಮ ಕುಟುಂಬದೊಂದಿಗೆ ಗಲಾಟೆ ಉಂಟಾಗಿದೆ. ಜಗಳ ತೀವ್ರಗೊಂಡಾಗ ರಮಣಮ್ಮ ಹಾಗೂ ಆಕೆಯ ತಮ್ಮ ರಾಮಯ್ಯ – ಅವರು ರಾಮಣಯ್ಯನ ಕಣ್ಣಿಗೆ ಕಾರದ ಪುಡಿ ಎರಚಿ, ಗಲಾಟೆಯ ನಡುವೆಯೇ ಆತನ ಕತ್ತು ಹಿಸುಕಿದರೆಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆ ನಡೆದ ಬಳಿಕ, ಮೃತದೇಹವನ್ನು ನಂದ್ಯಾಲದ ನೂನೆಪಲ್ಲೆಯಲ್ಲಿರುವ ರಾಮಣಯ್ಯನ ಮನೆಯ ಮುಂದೆ ಬಿಟ್ಟು ಪರಾರಿಯಾಗಿದ್ದಾರೆ. ಪತ್ನಿಯನ್ನು ಮನೆ ಮುಂದೆ ನೋಡಿದ ಮಕ್ಕಳಿಗೆ ಶಂಕೆ ಮೂಡಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ಇಬ್ಬರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ, ಕೊಲೆ ಮಾಡುವುದಾಗಿ ಮೊದಲು ನಿಗದಿಪಡಿಸಲಾಗಿತ್ತೆಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…