Crime

ಪತ್ನಿ ಹಾಗೂ ತಮ್ಮನಿಂದ ಗಂಡನ ಹತ್ಯೆ!: ಶವವನ್ನು ಮನೆಗೆ ‘ಡೋರ್ ಡೆಲಿವರಿ’ ಮಾಡಿದ ಭೀಕರ ಘಟನೆ

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮಂಗಳವಾರ ತೀವ್ರ ಸದ್ದು ಮೂಡಿಸಿರುವ ಗೃಹ ಕಲಹ ಹತ್ಯೆ ಪ್ರಕರಣ ನಡೆದಿದೆ. ಪತ್ನಿ ತನ್ನ ಸಹೋದರನ ಸಹಾಯದಿಂದ ಗಂಡನನ್ನು ಹತ್ಯೆಗೈದು, ಶವವನ್ನು ನೇರವಾಗಿ ಮನೆಯ ಮುಂದೆ ಬಿಟ್ಟಿರುವ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಮೃತ ವ್ಯಕ್ತಿ ನಂದ್ಯಾಲದ ನೂನೆಪಲ್ಲೆ ಗ್ರಾಮದ ನಿವಾಸಿ ರಾಮಣಯ್ಯ (ವಯಸ್ಸು 50). ಈತನ ಪತ್ನಿ ರಮಣಮ್ಮ ಮತ್ತು ಆಕೆಯ ಸಹೋದರ ರಾಮಯ್ಯ ಈ ದಾರುಣ ಕೃತ್ಯದಲ್ಲಿ ಪ್ರಮುಖ ಆರೋಪಿಗಳು. ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸಿದ ನಂತರ, ಕೊಲೆ ಮಾಡಿರುವುದನ್ನು ಆರೋಪಿಗಳು ಒಪ್ಪಿ ಕೊಂಡಿದ್ದಾರೆ.

ಹತ್ಯೆಗೆ ಹಿನ್ನಲೆ

ರಾಮಣಯ್ಯ ಹಾಗೂ ಪಿಡುಗುರಲ್ಲ ಗ್ರಾಮದ ರಮಣಮ್ಮ 20 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಜ್ಯೋತಿ, ಚಂದನ ಹಾಗೂ ಸಾಯಿ ಎಂಬ ಮಕ್ಕಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದಂಪತಿಗಳ ನಡುವೆ ಮನಸ್ತಾಪದಿಂದಾಗಿ, ರಮಣಮ್ಮ ತವರು ಮನೆ ಪಿಡುಗುರಲ್ಲಲ್ಲಿ ವಾಸವಾಗಿದ್ದಳು.

ಈ ನಡುವೆ ಮಂಗಳವಾರ ತನ್ನ ಪತ್ನಿಯನ್ನ ಕರೆತರುವ ಉದ್ದೇಶದಿಂದ ರಾಮಣಯ್ಯ ಪಿಡುಗುರಲ್ಲಕ್ಕೆ ತೆರಳಿದ್ದನು. ಅಲ್ಲಿಗೆ ತಲುಪಿದ ನಂತರ ರಮಣಮ್ಮ ಕುಟುಂಬದೊಂದಿಗೆ ಗಲಾಟೆ ಉಂಟಾಗಿದೆ. ಜಗಳ ತೀವ್ರಗೊಂಡಾಗ ರಮಣಮ್ಮ ಹಾಗೂ ಆಕೆಯ ತಮ್ಮ ರಾಮಯ್ಯ – ಅವರು ರಾಮಣಯ್ಯನ ಕಣ್ಣಿಗೆ ಕಾರದ ಪುಡಿ ಎರಚಿ, ಗಲಾಟೆಯ ನಡುವೆಯೇ ಆತನ ಕತ್ತು ಹಿಸುಕಿದರೆಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ನಡೆದ ಬಳಿಕ, ಮೃತದೇಹವನ್ನು ನಂದ್ಯಾಲದ ನೂನೆಪಲ್ಲೆಯಲ್ಲಿರುವ ರಾಮಣಯ್ಯನ ಮನೆಯ ಮುಂದೆ ಬಿಟ್ಟು ಪರಾರಿಯಾಗಿದ್ದಾರೆ. ಪತ್ನಿಯನ್ನು ಮನೆ ಮುಂದೆ ನೋಡಿದ ಮಕ್ಕಳಿಗೆ ಶಂಕೆ ಮೂಡಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ಇಬ್ಬರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ, ಕೊಲೆ ಮಾಡುವುದಾಗಿ ಮೊದಲು ನಿಗದಿಪಡಿಸಲಾಗಿತ್ತೆಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

15 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago