ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಮತ್ತೊಂದು ದುಃಖಕರ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಹಿಳೆಯ ತಾಯಿ, ಮಗಳ ಕೃತ್ಯದಿಂದ ಮಾನಸಿಕವಾಗಿ ನಲುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಹಾದೇವಿ ಬದಾಮಿ (57) ಎಂದು ಗುರುತಿಸಲಾಗಿದೆ. ಇವರು ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಆರೋಪಿ ಸುಮಾ ಮಂಜರಗಿ ಅವರ ತಾಯಿ. ಮಗಳ ವಿರುದ್ಧ ಗಂಭೀರ ಆರೋಪಗಳು ಹೊರಬಿದ್ದ ನಂತರ ಮಹಾದೇವಿ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದು, ಸಮಾಜದಲ್ಲಿ ಎದುರಾದ ಅವಮಾನ ಹಾಗೂ ಜನರ ಟೀಕೆಗಳಿಂದ ಮನನೊಂದು ಜೀವನ ಅಂತ್ಯಗೊಳಿಸಿರುವುದಾಗಿ ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಮಾಜಿ ಸೈನಿಕ ಸಂದೀಪ್ ಮಂಜರಗಿ ಅವರನ್ನು ₹2 ಕೋಟಿ ವಿಮೆ ಹಣಕ್ಕಾಗಿ ಪತ್ನಿ ಸುಮಾ ಮತ್ತು ಆಕೆಯ ಪ್ರಿಯಕರ ಸಂಚು ರೂಪಿಸಿ ಕೊಲೆ ಮಾಡಿದ್ದರು ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ತನಿಖೆ ನಡೆಸಿ ಜೂನ್ 14ರಂದು ಸುಮಾಳನ್ನು ಬಂಧಿಸಿದ್ದರು.
ಮಗಳ ಬಂಧನದ ನಂತರ ಮಹಾದೇವಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದರು. ಊರಿನಲ್ಲಿ ಜನರ ಎದುರು ತಲೆ ಎತ್ತಿ ನಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ. ಇದೇ ಬೇಸರದಲ್ಲಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಮಕನಮರಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಭಾರೀ ದುಃಖದ ವಾತಾವರಣ ಸೃಷ್ಟಿಸಿದ್ದು, ಒಂದೇ ಕುಟುಂಬದಲ್ಲಿ ನಡೆದ ಎರಡು ಆಘಾತಕಾರಿ ಘಟನೆಗಳು ಜನರನ್ನು ಬೆಚ್ಚಿಬೀಳಿಸಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…