ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಪತಿ ಹತ್ಯೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದು ಭಾರೀ ಸಂಚಲನ ಮೂಡಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿರುವ ಆರೋಪ ಕೇಳಿಬಂದಿದೆ.
ನಾರಾಯಣಖೇಡ್ ಮಂಡಲದ ಗಂಗಾಪುರ ಗ್ರಾಮದ ನಿವಾಸಿ ಚೆಂಬನುಳ್ಳ ಮುತ್ಯಂ ರೆಡ್ಡಿ (35) ಮೃತ ವ್ಯಕ್ತಿ. ಬೋರ್ವೆಲ್ ಮೋಟಾರ್ ರಿಪೇರಿ ಕೆಲಸ ಮಾಡುತ್ತಿದ್ದ ಮುತ್ಯಂ ರೆಡ್ಡಿಯ ಪತ್ನಿ ಕಲ್ಪನಾ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಇದೇ ವೇಳೆ ಮನ್ಸೂರ್ ಮಂಡಲದ ಎಲ್ಗೋಯಿ ಗ್ರಾಮದ ಗೌನಿ ಪಂಡರಿ ಎಂಬಾತನೊಂದಿಗೆ ಆಕೆಗೆ ಪರಿಚಯವಾಗಿದ್ದು, ನಂತರ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆ, ಆತನನ್ನು ಮುಗಿಸಲು ಕಲ್ಪನಾ ಹಾಗೂ ಪಂಡರಿ ಸಂಚು ರೂಪಿಸಿದ್ದರು ಎನ್ನಲಾಗಿದೆ. ಸುಮಾರು ಒಂಬತ್ತು ದಿನಗಳ ಹಿಂದೆ ಮುತ್ಯಂ ರೆಡ್ಡಿಯನ್ನು ನಾರಾಯಣಖೇಡ್-ರಾಯ್ಪಲ್ಲಿ ರಸ್ತೆಯಲ್ಲಿರುವ ದಾಬಾಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಊಟ ಮಾಡಿಸಿದ್ದರು. ಬಳಿಕ ಎಲ್ಗೋಯಿ ಗ್ರಾಮದ ಹೊರವಲಯದ ಜಮೀನಿಗೆ ಕರೆದೊಯ್ದು ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಯಾರಿಗೂ ಅನುಮಾನ ಬಾರದಂತೆ ಮಾಡಲು “ತಾತನ ಸಮಾಧಿ ನಿರ್ಮಾಣ” ಎಂಬ ನೆಪದಲ್ಲಿ ಮುಂಚಿತವಾಗಿಯೇ ಜೆಸಿಬಿ ಮೂಲಕ ಗುಂಡಿ ತೋಡಿಸಲಾಗಿತ್ತು. ಹತ್ಯೆಯ ಬಳಿಕ ಅದೇ ಗುಂಡಿಯಲ್ಲಿ ಶವವನ್ನು ಹೂತುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುತ್ಯಂ ರೆಡ್ಡಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಕಲ್ಪನಾಳ ಮೊಬೈಲ್ ಕರೆ ವಿವರಗಳಲ್ಲಿ ಅನುಮಾನಾಸ್ಪದ ಮಾಹಿತಿ ಪತ್ತೆಯಾದ ಕಾರಣ, ಪಂಡರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡು, ಶವ ಹೂತಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.
ಮೃತನಿಗೆ ಐದು ವರ್ಷದ ಹೆಣ್ಣು ಮಗಳಿದ್ದು, ಹೆಂಡತಿಯೇ ಗಂಡನ ಹತ್ಯೆಗೆ ಕಾರಣವಾಗಿರುವ ವಿಷಯ ತಿಳಿದು ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪ್ರಕರಣದ ಕುರಿತು ಡಿಎಸ್ಪಿ ವೆಂಕಟ್ ರೆಡ್ಡಿ, ಸಿಐ ಶ್ರೀನಿವಾಸ್ ರೆಡ್ಡಿ ಹಾಗೂ ಎಸ್ಐ ಕೋಟೇಶ್ವರರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್ನಲ್ಲಿ ರಸ್ತೆ ಸಂಪೂರ್ಣ ಕುಸಿದು…
ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ…
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…
ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…
ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…
ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…